ಉಪ್ಪಿನಂಗಡಿ: ಕಾರು- ಆಕ್ಟಿವಾ ನಡುವೆ ಢಿಕ್ಕಿ ➤ ಸವಾರನಿಗೆ ಗಾಯ..!

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಫೆ. 16. ಕಾರು ಮತ್ತು ಆಕ್ಟಿವಾ ನಡುವೆ ಅಪಘಾತ ಸಂಭವಿಸಿ ಸವಾರ ಗಾಯಗೊಂಡ ಘಟನೆ ರಾ.ಹೆ 75ರ ಕೂಟೇಲು ಸೇತುವೆ ಬಳಿ ನಡೆದಿದೆ.


ಗಾಯಗೊಂಡವರನ್ನು ಉಪ್ಪಿನಂಗಡಿ ಮಠ ನಿವಾಸಿ ಇಯಾಸ್ ಎಂದು ಗುರುತಿಸಲಾಗಿದೆ. ಇವರು ಉಪ್ಪಿನಂಗಡಿ ಮಠದ ಕಡೆಗೆ ಹೋಗುತ್ತಿದ್ದ ವೇಳೆ ವಿರುದ್ದ ದಿಕ್ಕಿನಿಂದ ಬಂದ ಕಾರು ಹಠಾತ್ತನೆ ಬಲಗಡೆಗೆ ತಿರುಗಿದ್ದು, ಪರಿಣಾಮ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ. ಗಾಯಾಳು ಸವಾರನನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪುತ್ತೂರು ಸಂಚಾರಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Also Read  ಪರಿಚಯದವರ ಮನೆಯಲ್ಲಿ ಕಳ್ಳತನ ➤ ಮೂವರು ಮಹಿಳೆಯರ ಬಂಧನ

error: Content is protected !!
Scroll to Top