ಕಡಬ: ಅನಾರೋಗ್ಯದಿಂದ ಬಳಲುತ್ತಿದ್ದ ಪಿಯುಸಿ ವಿದ್ಯಾರ್ಥಿ ಮೃತ್ಯು…!!

(ನ್ಯೂಸ್ ಕಡಬ) newskadaba.com ಕಡಬ, ಮಾ. 03. ಅನಾರೋಗ್ಯದಿಂದ ಬಳಲುತ್ತಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ನಿಡ್ಡೋ ಎಂಬಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ನಿಡ್ಡೋ ನಿವಾಸಿ ಪದ್ಮನಾಭ ಗೌಡ ಹಾಗೂ ಯಶೋದಾ ದಂಪತಿ ಪುತ್ರ ಧನುಷ್ ಎಂದು ಗುರುತಿಸಲಾಗಿದೆ. ಈತ ನೂಜಿಬಾಳ್ತಿಲ ಬೆಥನಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ. ಕಳೆದ ಕೆಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಈತ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಮೃತ ವಿದ್ಯಾರ್ಥಿ ತಂದೆ, ತಾಯಿ ಹಾಗೂ ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ.

Also Read  ವರುಣಾದಲ್ಲಿ ಸಿದ್ದರಾಮಯ್ಯ ಸೋತರೂ ಆಶ್ಚರ್ಯವಿಲ್ಲ ಎಂದ ಮಾಜಿ ಸಿಎಂ...!➤ಬಿ.ಎಸ್‌.ಯಡಿಯೂರಪ್ಪ

error: Content is protected !!
Scroll to Top