?? ಬಂಟ್ವಾಳ: ಪಾದಚಾರಿ ಮಹಿಳೆಯ ಕುತ್ತಿಗೆಯಿಂದ ಸರ ಎಗರಿಸಿ ಪರಾರಿಯಾದ ಕಳ್ಳರು..!!!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಮಾ. 14. ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೋರ್ವ ಕುತ್ತಿಗೆಯಲ್ಲಿದ್ದ ಮಾಂಗಲ್ಯ ಸರವನ್ನು ಬೈಕ್ ನಲ್ಲಿ ಬಂದ ಅಪರಿಚಿರಿಬ್ಬರು ಎಳೆದು ಪರಾರಿಯಾದ ಘಟನೆ ಬಿಸಿರೋಡ್ ನ ಕೈಕುಂಜೆ ಪೂರ್ವ ಬಡಾವಣೆಯಲ್ಲಿ ನಡೆದಿದೆ.

ಸುಲೋಚನಾ ಎಂಬವರು ಹೊಲಿಯಲು ಕೊಟ್ಟಿದ್ದ ಬಟ್ಟೆಯನ್ನು ಪಡೆದುಕೊಂಡು ವಾಪಾಸು ಮನೆಗೆ ಹಿಂತಿರುಗುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಅಪರಿಚಿತರ ಪೈಕಿ ಹಿಂಬದಿ ಸವಾರ ಮಹಿಳೆಯ ಕುತ್ತಿಗೆಯಲ್ಲಿದ್ದ ಅಂದಾಜು 28 ಗ್ರಾಂ. ತೂಕ ಮೌಲ್ಯದ ಸರವನ್ನು ಎಳೆದೊಯ್ದಿದ್ದಾರೆ ಎನ್ನಲಾಗಿದೆ. ಕೂಡಲೇ ಸ್ಥಳೀಯರು ಪೊಲೀಸರಿಗೆ ವಿಷಯ ತಿಳಿಸಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Also Read  ಸಿದ್ದರಾಮಯ್ಯ ತಿಥಿ ಪತ್ರಿಕೆ ಪೋಸ್ಟ್..!! - ಬಿಜೆಪಿ ಕಾರ್ಯಕರ್ತನ ವಿರುದ್ಧ ಪ್ರಕರಣ

error: Content is protected !!
Scroll to Top