ಸುಳ್ಯದಲ್ಲಿ ಯುವಕನ ಮೇಲೆ ಗುಂಡು ಹಾರಾಟ ಪ್ರಕರಣ ➤ ನಾಡ ಪಿಸ್ತೂಲು ಸಹಿತ ಮೂವರ ಬಂಧನ

(ನ್ಯೂಸ್ ಕಡಬ) newskadaba.com ಸುಳ್ಯ, ಜೂ. 10. ಅಪರಿಚಿತ ತಂಡವೊಂದು ಯುವಕನ ಮೇಲೆ ಗುಂಡಿನ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ.


ಬಂಧಿತರನ್ನು ಕೆ ಜಯನ್, ವಿನೋದ್ ಆರ್ ಹಾಗೂ ಹೆಚ್.ಎಸ್.ಮನೋಜ್ ಎಂದು‌ ಗುರುತಿಸಲಾಗಿದೆ. ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ನಾಡ ಪಿಸ್ತೂಲು ಮತ್ತು ಎರಡು ಸಜೀವ ಗುಂಡುಗಳನ್ನು ಹಾಗೂ ಸ್ಕಾರ್ಫಿಯೋ ಕಾರನ್ನು ವಶಪಡಿಸಿಕೊಳ್ಳಲಾಗಿದೆ.

Scroll to Top