ಮರೆಯಾದ ಕಡಬದ ಹಿರಿಯ ಸಾಹಿತಿ ಕೆ.ಗೋಪಾಲ ರಾವ್ ► ಇಂದು ಕಡಬದಲ್ಲಿ ಸಾರ್ವಜನಿಕ ಶ್ರದ್ಧಾಂಜಲಿಯ ಸಮಾಲೋಚನಾ ಸಭೆ

(ನ್ಯೂಸ್ ಕಡಬ) newskadaba.com ಕಡಬ, ನ.11. ಇತ್ತೀಚೆಗೆ ನಮ್ಮಿಂದ ಅಗಲಿದ ಹಿರಿಯ ಸಾಹಿತಿ, ರಾಷ್ಟ್ರ ಪ್ರಶಸ್ತಿ ವಿಜೇತ ಧಾರ್ಮಿಕ ಮುಂದಾಳು, ನಿವೃತ್ತ ಮುಖ್ಯ ಶಿಕ್ಷಕ ದಿವಂಗತ ಕೆ. ಗೋಪಾಲ ರಾವ್ ಅವರಿಗೆ ಸಾರ್ವಜನಿಕ ಶ್ರದ್ಧಾಂಜಲಿ ನಡೆಸುವ ಸಲುವಾಗಿ ಇಂದು ಸಮಾಲೋಚನಾ ಸಭೆ ಕರೆಯಲಾಗಿದೆ.

ಕಡಬದ ಅನುಗ್ರಹ ಮಿನಿ ಹಾಲ್‌ನಲ್ಲಿ ಬೆಳಿಗ್ಗೆ 10.00 ಗಂಟೆಗೆ ನಡೆಯಲಿರುವ ಈ ಸಮಾಲೋಚನಾ ಸಭೆಯಲ್ಲಿ ಗೋಪಾಲ ರಾವ್ ಅವರ ಅಭಿಮಾನಿಗಳು, ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಸಲಹೆ, ಸೂಚನೆಗಳನ್ನು ನೀಡಬೇಕಾಗಿ ಸಾರ್ವಜನಿಕ ಪ್ರಕಟಣೆ ತಿಳಿಸಿದೆ.

error: Content is protected !!

Join the Group

Join WhatsApp Group