ಜೂ. 29ರಂದು ಪಶು ಸಂಗೋಪನಾ ಸಚಿವ ಕೊಯ್ಲ ಜಾನುವಾರು ಸಂವರ್ಧನಾ ಕೇಂದ್ರಕ್ಕೆ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 28. ಪಶು ಸಂಗೋಪನೆ ಸಚಿವರಾದ ಪ್ರಭು ಬಿ. ಚೌಹಾಣ್ ಅವರು ಜೂ. 29ರಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

 


ವಿವರ ಇಂತಿದೆ:
ಅವರು ಜೂ. 29ರ ಬುಧವಾರ ಬೆಳಿಗ್ಗೆ 11 ಗಂಟೆಗೆ ರಸ್ತೆ ಮಾರ್ಗವಾಗಿ ಮಡಿಕೇರಿಯಿಂದ ಕೊಯ್ಲ ಕ್ಕೆ ಆಗಮಿಸುವರು. 11 ರಿಂದ ಮಧ್ಯಾಹ್ನ 1 ಗಂಟೆಯ ವರೆಗೆ ಕಡಬ ತಾಲೂಕಿನ ಕೊಯ್ಲ ಜಾನುವಾರು ಸಂವರ್ಧನಾ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿರುವ ದಕ್ಷಿಣ ಕನ್ನಡ ಜಿಲ್ಲಾ ಗೋಶಾಲೆ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 2 ರಿಂದ 3 ಗಂಟೆಯವರೆಗೆ ಕೊಯ್ಲ ಜಾನುವಾರು ಕೇಂದ್ರಕ್ಕೆ ಭೇಟಿ ಹಾಗೂ ಪರಿಶೀಲನೆ ನಡೆಸುವರು. ಮಧ್ಯಾಹ್ನ 3 ಗಂಟೆಗೆ ರಸ್ತೆ ಮಾರ್ಗವಾಗಿ ಬೆಂಗಳೂರಿಗೆ ಪ್ರಯಾಣಿಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಕೆಲಸದ ಸಮಸ್ಯೆಗಳಿಗೆ ಹೀಗೆ ಮಾಡಿ.

error: Content is protected !!
Scroll to Top