ಮಂಗಳೂರು: ಮಳೆ ಅವಾಂತರ ➤ ನೀರಿನಲ್ಲಿ ಕೊಚ್ಚಿಹೋಗಿ ವ್ಯಕ್ತಿ ಮೃತ್ಯು…!

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 30. ಮುಂಜಾನೆಯಿಂದ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ವ್ಯಕ್ತಿಯೋರ್ವ ತೋಡಿನಲ್ಲಿ ಕೊಚ್ಚಿಹೋಗಿ ಮೃತಪಟ್ಟ ಘಟನೆ ಕೊಲ್ನಾಡು ಕೆಎಸ್ ರಾವ್ ನಗರದಲ್ಲಿ ನಡೆದಿದೆ.

 

ಮೃತಪಟ್ಟವರನ್ನು ಸುನಿಲ್ ಎಂದು ಗುರುತಿಸಲಾಗಿದೆ. ಘಟನೆಯು ಬುಧವಾರ ರಾತ್ರಿ ನಡೆದಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಮುಲ್ಕಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ‌.

error: Content is protected !!

Join the Group

Join WhatsApp Group