ಸ್ವತಃ ಊಟ ಬಡಿಸದೇ, ನೀನೇ ಬಡಿಸಿಕೊಂಡು ಉಣ್ಣು ಎಂದ ತಾಯಿ..!!! ➤ ನೇಣಿಗೆ ಶರಣಾದ ಬಾಲಕ

(ನ್ಯೂಸ್ ಕಡಬ) newskadaba.com ಕೋಟ, ಜು. 12. ತಾಯಿಯು ಊಟ ಬಡಿಸದೇ, ನೀನೇ ಹೋಗಿ ಬಡಿಸಿಕೋ ಎಂದು ಹೇಳಿದ್ದಕ್ಕೆ ಬಾಲಕನೋರ್ವ ನೇಣಿಗೆ ಶರಣಾದ ಘಟನೆ ಉಡುಪಿ ಜಿಲ್ಲೆಯ ಕೋಟದಲ್ಲಿ ಸಕೊಮವಾರದಂದು ನಡೆದಿದೆ.


ಆತ್ಮಹತ್ಯೆ ಮಾಡಿಕೊಂಡ ಬಾಲಕನನ್ನು ಕೋಟ ಸಮೀಪದ ಕಾರ್ಕಡ ನಿವಾಸಿ ಲಕ್ಷ್ಮೀ ಎಂಬವರ ಪುತ್ರ 9ನೇ ತರಗತಿ ವಿದ್ಯಾರ್ಥಿ ನಾಗೇಂದ್ರ (14) ಎಂದು ಗುರುತಿಸಲಾಗಿದೆ. ಈತನ ತಾಯಿ ಲಕ್ಷ್ಮೀ ಅವರು, ಜೀವನೋಪಾಯ ಕ್ಕಾಗಿ ಕಾರ್ಕಡದ ತನ್ನ ಮನೆಪಕ್ಕದಲ್ಲೇ ವೀರಭದ್ರ ಎಂಬ ಸಣ್ಣ ಕ್ಯಾಂಟೀನ್‌ ನಡೆಸುತ್ತಿದ್ದಾರೆ. ವಿಪರೀತ ಮಳೆ ಹಿನ್ನೆಲೆ ಶಾಲೆಗೆ ರಜೆಯಿದ್ದ ಕಾರಣ ನಾಗೇಂದ್ರ ಕಾರ್ಕಡ ಶಾಲಾ ಮೈದಾನಲ್ಲಿ ಆಡಲು ಹೋಗಿದ್ದು, ಮಧ್ಯಾಹ್ನ ಊಟಕ್ಕೆಂದು ಕ್ಯಾಂಟಿನ್ ಬಳಿ ಬಂದ ಬಾಲಕ ತಾಯಿ ಬಳಿ ಊಟ ಬಡಿಸಲು ಹೇಳಿದ್ದಾನೆ. ಇದೇ ವೇಳೆ ಕ್ಯಾಂಟೀನ್‌ನಲ್ಲಿ ಗ್ರಾಹಕರಿದ್ದುದರಿಂದ ಮಗನಿಗೆ ಮನೆಗೆ ಹೋಗಿ ಊಟ ಬಡಿಸಿಕೊಂಡು ಉಣ್ಣುವಂತೆ ತಾಯಿ ಹೇಳಿದ್ದಾರೆ. ಆದರೆ ಇಷ್ಟಕ್ಕೆ ಸಿಟ್ಟುಗೊಂಡ ಆತ ಮನೆಯಲ್ಲಿ ಬಟ್ಟೆ ಒಣಗಿಸಲು ಸಿಟೌಟ್‌ನಲ್ಲಿ ಕಟ್ಟಿದ ಹಗ್ಗಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಲಕ್ಷಾಂತರ ಬೆಲೆಬಾಳುವ ಚಿನ್ನಾಭರಣ ಕಳವು!

 

error: Content is protected !!
Scroll to Top