ಲಾರಿಗೆ ಕಾರು ಢಿಕ್ಕಿ ➤ ಅಬಕಾರಿ ಇಲಾಖೆಯ ನಿವೃತ್ತ ಡಿವೈಎಸ್ಪಿ ಹಾಗೂ ಪತ್ನಿ ಸ್ಥಳದಲ್ಲೇ ಮೃತ್ಯು..!!

(ನ್ಯೂಸ್ ಕಡಬ) newskadaba.com ಚಿತ್ರದುರ್ಗ, ಜು. 18. ನಿಂತಿದ್ದ ಲಾರಿಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 4 ರ ಕಸವನಹಳ್ಳಿ ಬಳಿ ನಡೆದಿದೆ.

ಮೃತಪಟ್ಟವರನ್ನು ಚಿಕ್ಕಜೋಗಿ ಹಳ್ಳಿ ಮೂಲದ ಅಬಕಾರಿ ಇಲಾಖೆ ನಿವೃತ್ತ ಡಿವೈಎಸ್ ಪಿ ಜಯರಾಂ ನಾಯ್ಕ್ (73) ಹಾಗೂ ಅವರ ಪತ್ನಿ ಲತಾ (63) ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ದಾವಣಗೆರೆಗೆ ಸಂಚರಿಸುತ್ತಿದ್ದ ವೇಳೆ ಕಸವನಹಳ್ಳಿ ಬಳಿ ಈ ಅವಘಡ ಸಂಭವಿಸಿದೆನ್ನಲಾಗಿದೆ.

error: Content is protected !!

Join the Group

Join WhatsApp Group