ಪುತ್ತೂರು: ಭಿನ್ನಕೋಮಿನ ವಿದ್ಯಾರ್ಥಿಗಳ ನಡುವೆ ಹೊಡೆದಾಟ- ಹಲ್ಲೆ ➤ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಪುತ್ತೂರು, ಜು. 23. ಖಾಸಗಿ ಸ್ಟಡಿ ಸೆಂಟರ್ ನ ಭಿನ್ನಕೋಮಿನ ತಂಡದ ವಿದ್ಯಾರ್ಥಿಗಳ ನಡುವೆ ಹೊಡೆದಾಟ ನಡೆದು ಪರಸ್ಪರ ಹಲ್ಲೆ ನಡೆಸಿ ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾದ ಘಟನೆ ಪುತ್ತೂರಿನಲ್ಲಿ ನಡೆದಿದೆ.


ಇಮ್ರಾನ್ ಎಂಬಾತ ಹೊರಗಿನಿಂದ ಯುವಕರನ್ನು ಕರೆ ತಂದು ಹಲ್ಲೆ ನಡೆಸಿದ್ದಾನೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ, ಅಷ್ಟೇ ಅಲ್ಲದೆ ಬಸ್ ನಿಲ್ದಾಣದಲ್ಲಿಯೂ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಿದ್ದು, ವಿದ್ಯಾರ್ಥಿಗಳಾದ ಕಾರ್ತಿಕ್ ಅಜ್ಜಿನಡ್ಕ ಮತ್ತು ಲಿತೀಶ್ ಕಬಕ ರವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

Also Read  ದ. ಕ ಜೇನು ವ್ಯವಸಾಯಗಾರರ ಸಹಕಾರ ಸಂಘದ ನೂತನ ಆಡಳಿತ ಕಚೇರಿ ಉದ್ಘಾಟನೆ

error: Content is protected !!
Scroll to Top