ಸುಬ್ರಹ್ಮಣ್ಯ: ಮಳೆಹಾನಿ ಪ್ರದೇಶಗಳಿಗೆ ಸಚಿವ ಎಸ್.ಅಂಗಾರ ಭೇಟಿ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ. 02. ಭಾರೀ ಮಳೆಗೆ ಹಾನಿಗೊಳಗಾದ ಸುಬ್ರಹ್ಮಣ್ಯದ ಪ್ರದೇಶಗಳಿಗೆ ಸಚಿವ ಎಸ್.ಅಂಗಾರ ಮಂಗಳವಾರ ಬೆಳಗ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಮಳೆಯಿಂದ ಉಂಟಾದ ಹಾನಿಗಳ ಬಗ್ಗೆ ಮಾಹಿತಿ ತಿಳಿದ ಕೂಡಲೇ ರಾತ್ರಿ ವೇಳೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ಇಂದು ಬೆಳಗ್ಗೆ ಹರಿಹರ ಪಲ್ಲತ್ತಡ್ಕಕ್ಕೆ ಭೇಟಿ ನೀಡಿದ್ದೇನೆ. ಮನೆ ಹಾನಿ, ರಸ್ತೆ, ಸೇತುವೆ ಹಾನಿಗಳ ಬಗ್ಗೆ ಮಾಹಿತಿ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ತುರ್ತು ಕ್ರಮಕ್ಕೆ ಕೂಡಲೇ ಕ್ರಮ ಕೈಗೊಳ್ಳಲಾಗುವುದು. ಈಗಿನಿಂದಲೇ ಪರಿಹಾರ ಕಾರ್ಯ ನಡೆಸಲಾಗುತ್ತಿದೆ ಎಂದ ಅವರು ಘಟನೆಗಳ ಬಗ್ಗೆ ಮುಖ್ಯಮಂತ್ರಿಗಳಿಗೂ ಮಾಹಿತಿ ನೀಡುವ ಕೆಲಸ ಮಾಡಲಾಗುವುದು ಎಂದರು.

Also Read  ದೇಶದಲ್ಲಿ ಕೊರೋನಾ ಆತಂಕ - ಗೈಡ್ ಲೈನ್ಸ್ ಬಿಡುಗಡೆ ಮಾಡಿದ ಕರ್ನಾಟಕ ಸರಕಾರ

error: Content is protected !!
Scroll to Top