ಕಡಬ, ಪುತ್ತೂರು, ಸುಳ್ಯ & ಉಪ್ಪಿನಂಗಡಿ ಠಾಣಾ ಪೊಲೀಸರ ವರ್ಗಾವಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 03. ‘ಸೇವಾ ಅವಧಿಯಲ್ಲಿ ಒಂದು ಬಾರಿ ಮಾತ್ರ’ ಎಂದು ಪರಿಗಣಿಸಿ ಪರಸ್ಪರ ಸ್ಥಳ ಬದಲಾವಣೆ ಮಾಡಿ ವಿವಿಧ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಕಾನ್‌ಸ್ಟೇಬಲ್, ಹೆಡ್‌ಕಾನ್‌ಸ್ಟೇಬಲ್‌ ಹಾಗೂ ಓರ್ವ ಎಎಸ್‌ಐಯವರನ್ನು ಕೋರಿಕೆಯ ಮೇಲೆ ವರ್ಗಾವಣೆ ಮಾಡಿ ದ.ಕ.ಜಿಲ್ಲಾ ಪೊಲೀಸ್ ಅಧೀಕ್ಷಕರು ಆದೇಶ ಹೊರಡಿಸಿದ್ದಾರೆ.

ಕಡಬ ಪೊಲೀಸ್ ಠಾಣೆಯಲ್ಲಿ ಕಾನ್‌ಸ್ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿರುವ ಶ್ರೀಶೈಲ ಎಂ.ಕೆ ಅವರನ್ನು ಪುತ್ತೂರು ಸಂಚಾರ ಪೊಲೀಸ್ ಠಾಣೆಗೆ, ಪುತ್ತೂರು ಸಂಚಾರ ಪೊಲೀಸ್ ಠಾಣೆಯಿಂದ ಮಲ್ಲಿಕಾರ್ಜುನಯ್ಯ ಮುಳ್ಳಾಮಠ ಅವರನ್ನು ಕಡಬ ಠಾಣೆಗೆ, ಮಹಿಳಾ ಪೊಲೀಸ್ ಠಾಣೆಯ ಪ್ರತಾಪ್ ಅವರನ್ನು ಉಪ್ಪಿನಂಗಡಿ ಠಾಣೆಗೆ, ಉಪ್ಪಿನಂಗಡಿ ಠಾಣಾ ಗಂಗಾ ನಾಯ್ಕ ಎಸ್.ಸಿ.ಅವರನ್ನು ಮಹಿಳಾ ಪೊಲೀಸ್ ಠಾಣೆಗೆ, ಬೆಳ್ತಂಗಡಿ ಠಾಣೆಯ ಸಿಹೆಚ್‌ಸಿ ಶಿವರಾಮ ರೈ ಅವರನ್ನು ಉಪ್ಪಿನಂಗಡಿ ಠಾಣೆಗೆ, ಉಪ್ಪಿನಂಗಡಿ ಠಾಣೆಯ ಸವಿತಾ ಎ.ಅವರನ್ನು ಬೆಳ್ತಂಗಡಿ ಸಂಚಾರ ಠಾಣೆಗೆ ವರ್ಗಾವಣೆಗೊಳಿಸಲಾಗಿದೆ. ಅದೇ ರೀತಿ ಸುಳ್ಯ ಪೊಲೀಸ್ ಠಾಣೆಯ ಮಹಿಳಾ ಹೆಡ್‌ಕಾನ್‌ಸ್ಟೇಬಲ್ ಶ್ರೀಮತಿ ಸಂತೃಪ್ತಿ ಕೆ.ಬಿ.ಅವರನ್ನು ಪುತ್ತೂರು ನಗರ ಪೊಲೀಸ್ ಠಾಣೆಗೆ ಮತ್ತು ಬೆಳ್ತಂಗಡಿ ಸಂಚಾರ ಠಾಣಾ ಎಎಸ್‌ಐ ಪೌಲೋಸ್ ಸಿ.ಜೆ. ಅವರನ್ನು ಧರ್ಮಸ್ಥಳ ಪೊಲೀಸ್ ಠಾಣೆಗೆ ವರ್ಗಾವಣೆಗೊಳಿಸಲಾಗಿದೆ. ಈ ಕುರಿತು ಸಂಬಂಧಪಟ್ಟ ಠಾಣಾಧಿಕಾರಿಯವರು ಸ್ಥಳ ಬದಲಾವಣೆಯಲ್ಲಿರುವ ಎಎಸ್‌ಐ, ಹೆಚ್‌ಸಿ, ಪಿಸಿರವರನ್ನು ಕೂಡಲೇ ಕರ್ತವ್ಯದಿಂದ ಬಿಡುಗಡೆಗೊಳಿಸಿ, ಪ್ರಸಕ್ತ ನೇಮಿಸಲಾದ ಠಾಣೆಗಳಲ್ಲಿ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಿ, ಕರ್ತವ್ಯಕ್ಕೆ ಹಾಜರಾದ ಕೂಡಲೇ ಕಚೇರಿಗೆ ಮಾಹಿತಿ ನೀಡುವಂತೆ ಎಸ್ಪಿಯವರು ಆದೇಶದಲ್ಲಿ ತಿಳಿಸಿದ್ದಾರೆ.

error: Content is protected !!

Join the Group

Join WhatsApp Group