ಸ್ಕೇಟ್ ಬೋರ್ಡ್ ಮೇಲೆ ಕನ್ಯಾಕುಮಾರಿಯಿಂದ ಕಾಶ್ಮೀರಕ್ಕೆ ತೆರಳುತ್ತಿದ್ದ ಯುವಕ ಅಪಘಾತಕ್ಕೆ ಬಲಿ…!

(ನ್ಯೂಸ್ ಕಡಬ) newskadaba.com ಹರಿಯಾಣ, ಆ. 04. ಸ್ಕೇಟಿಂಗ್ ಬೋರ್ಡ್ ಮೇಲೆ ಕನ್ಯಾಕುಮಾರಿಯಿಂದ ಕಾಶ್ಮೀರಕ್ಕೆ ತೆರಳುತ್ತಿದ್ದ ಕೇರಳ ಮೂಲದ ಕ್ರೀಡಾಪಟುವೊಬ್ಬರು ಅಪಘಾತದಲ್ಲಿ ಮೃತಪಟ್ಟ ಘಟನೆ ವರದಿಯಾಗಿದೆ.

ಮೃತರನ್ನು ಕೇರಳ ತಿರುವನಂತಪುರಂ ಮೂಲದಲ್ಲಿ ಅನಾಸ್ ಅಜಾಸ್ ಎಂದು ಗುರುತಿಸಲಾಗಿದೆ. ಈತ ಪಂಚಕುಲದ ಪಿಂಜೋರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸ್ಕೇಟಿಂಗ್ ಮಾಡುತ್ತಿದ್ದ ವೇಳೆ ಅಪರಿಚಿತ ಟ್ರಕ್ ಢಿಕ್ಕಿ ಹೊಡೆದು ಪರಾರಿಯಾಗಿದೆ. ಕೂಡಲೇ ಸ್ಥಳೀಯರು ಸೇರಿ ಅನಸ್ ಅವರನ್ನು ಆಸ್ಪತ್ರೆಗೆ ಸೇರಿಸಿದರಾದರೂ ಅದಾಗಲೇ ಅವರು ಮೃತಪಟ್ಟಿದ್ದರು ಎಂದೆನ್ನಲಾಗಿದೆ. ಮೇ. 29ರಂದು ಕನ್ಯಾಕುಮಾರಿಯಿಂದ ಪ್ರಯಾಣವನ್ನು ಆರಂಭಿಸಿದ್ದ ಇವರು, 3511ಕಿ.ಮೀ ಕ್ರಮಿಸಿ ಕಾಶ್ಮೀರ ತಲುಪುವ ಗುರಿ ಹೊಂದಿದ್ದರು. ಆದರೆ ನಿಗದಿತ ಸ್ಥಳಕ್ಕೆ ತಲುಪಲು ಕೇವಲ 600 ಕಿ.ಮೀ ಬಾಕಿಯಿರುವಾಗಲೇ ಅವರು ಅಪಘಾತಕ್ಕೆ ಬಲಿಯಾಗಿದ್ದಾರೆ.

Also Read  ಖ್ಯಾತ ಸಾಮಾಜಿಕ ಕಾರ್ಯಕರ್ತ ಮಹೇಂದ್ರ ಕುಮಾರ್ ಇನ್ನಿಲ್ಲ

error: Content is protected !!
Scroll to Top