ಹಾವು ಕಡಿತದಿಂದ ಮೃತಪಟ್ಟ ಅಣ್ಣನ ಅಂತ್ಯ ಸಂಸ್ಕಾರಕ್ಕೆ ಬಂದಿದ್ದ ತಮ್ಮನಿಗೂ ಹಾವು ಕಡಿತ- ಮೃತ್ಯು..!

(ನ್ಯೂಸ್ ಕಡಬ) newskadaba.com ಬಲರಾಮಪುರ, ಆ. 05. ಹಾವು ಕಡಿತದಿಂದ ಮೃತಪಟ್ಟ ಸಹೋದರನ ಅಂತ್ಯಕ್ರಿಯೆಗೆ ಬಂದಿದ್ದ ವ್ಯಕ್ತಿಯೂ ಹಾವು ಕಡಿತಕ್ಕೆ ಒಳಗಾಗಿ ಮೃತಪಟ್ಟ ಘಟನೆ ಉ.ಪ್ರದೇಶದ ಬಲರಾಮಪುರದಲ್ಲಿ ನಡೆದಿದೆ.


ಮೃತಪಟ್ಟವರನ್ನು ಅರವಿಂದ್ ಮಿಶ್ರಾ ಹಾಗೂ ಅವರ ಅಂತ್ಯಕ್ರಿಯೆಗೆ ಬಂದಿದ್ದ ತಮ್ಮ ಗೋವಿಂದ ಮಿಶ್ರಾ ಎಂದು ಗುರುತಿಸಲಾಗಿದೆ. ಗೋವಿಂದ ಮಿಶ್ರಾ ಅವರು ಲುಧಿಯಾನದಿಂದ ಭವಾನಿಪುರಕ್ಕೆ ಅಣ್ಣನ ಅಂತ್ಯ ಸಂಸ್ಕಾರಕ್ಕೆಂದು ಬಂದು, ವಿಧಿವಿಧಾನಗಳನ್ನೆಲ್ಲ ಮುಗಿಸಿ, ರಾತ್ರಿ ಮನೆಯಲ್ಲಿ ಮಲಗಿದ್ದ ವೇಳೆ ಹಾವು ಕಡಿದಿದ್ದು, ಮೃತಪಟ್ಟಿದ್ದಾರೆ ಎನ್ನಲಾಗಿದೆ. ಅಲ್ಲದೇ ಅವರ ಜೊತೆಗೆ ಮಲಗಿದ್ದ ಸಂಬಂಧಿ ಚಂದ್ರಶೇಖರ್ ಪಾಂಡೆ ಎಂಬವರಿಗೂ ಹಾವು ಕಚ್ಚಿದ್ದು, ಗಂಭೀರ ಸ್ಥಿತಿಯಲ್ಲಿರುವ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸರ್ಕಲ್​ ಇನ್ಸ್​ಪೆಕ್ಟರ್​ ರಾಧಾ ರಮಣ್​ ಸಿಂಹ್​ ತಿಳಿಸಿರುವುದಾಗಿ ವರದಿಯಾಗಿದೆ.

error: Content is protected !!

Join the Group

Join WhatsApp Group