ಹೆಂಡತಿಗೆ ಬೈದನೆಂದು ಸ್ನೇಹಿತನನ್ನೇ ಕೊಲೆ ಮಾಡಿದ ಯುವಕ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 09. ತನ್ನ ಹೆಂಡತಿಗೆ ಬೈದನೆಂದು ವ್ಯಕ್ತಿಯೋರ್ವ ಸ್ನೇಹಿತನನ್ನೇ ಕೊಲೆ ಮಾಡಿದ ಘಟನೆ ಜೆಪಿ ನಗರದ ಸಿದ್ಧಲಿಂಗೇಶ್ವರ ಥಿಯೇಟರ್ ಬಳಿ ನಡೆದಿದೆ.

ಕೊಲೆಯಾದವರನ್ನು ಬಸವರಾಜು ಎಂದು ಗುರುತಿಸಲಾಗಿದೆ. ಕುಡಿದ ಅಮಲಿನಲ್ಲಿದ್ದ ಈತ ಸ್ನೇಹಿತ ಅಭಿಷೇಕ್ ಹಾಗೂ ಅತನ ಪತ್ನಿಯನ್ನುಅವಾಚ್ಯವಾಗಿ ಬೈಯುತ್ತಿದ್ದ, ಎಂಬ ಕಾರಣಕ್ಕೆ ಅಭಿಷೇಕ್ ಕೊಲೆ ಮಾಡಿರುವುದಾಗಿ ತಿಳಿದು ಬಂದಿದೆ. ಆರೋಪಿ ಅಭಿಷೇಕ್ ಹಾಗೂ ಬಸವರಾಜ್ ಎರಡು ವರ್ಷಗಳಿಂದ ಒಟ್ಟಿಗೆ ಕೆಲಸಮಾಡುತ್ತಿದ್ದರು ಎನ್ನಲಾಗಿದೆ. ಸದ್ಯ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!

Join the Group

Join WhatsApp Group