ಹಾಡಹಗಲೇ ಪೊಲೀಸ್ ಮನೆಯಲ್ಲಿ ಕಳ್ಳ ತನ

(ನ್ಯೂಸ್ ಕಡಬ) newskadaba.com  ಮಂಡ್ಯ, ಡಿ. 10. ಶ್ರೀರಂಗಪಟ್ಟಣ ತಾಲೂಕಿನ ಕೆಆರ್ ಎಸ್ ಸಮೀಪದ ಗ್ರಾಮದಲ್ಲಿ ಪೊಲೀಸ್ ಮುಖ್ಯ ಪೇದೆಯೊಬ್ಬರ ಮನೆಯಲ್ಲಿ ಕಳ್ಳರು ಕೈಚಳಕ ತೋರಿದ ಘಟನೆ ನಡೆದಿದೆ.

 

ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹೆಡ್ ಕನ್ಸ್ ಟೇಬಲ್ ರವಿ ಅವರು ಪತ್ನಿ ಜೊತೆ ಅಸ್ಪತ್ರೆಗೆ ತೆರಳಿದ್ದು, ಮರಳಿ ಬಂದು ನೋಡಿದಾಗ ಚಿನ್ನಾಭರಣ ಕಳವಾಗಿರುವುದು ಗೊತ್ತಾಗಿದೆ. ಮನೆಯ ಬಾಗಿಲು ಅಥವಾ ಬೀರುವನ್ನು ಒಡೆಯದೆ ಕೀ ಬಳಸಿ, ಅಂದಾಜು 3.80 ಲಕ್ಷ ರೂ. ಮೌಲ್ಯದ 95 ಗ್ರಾಂ ಚಿನ್ನಾಭರಣವನ್ನು ದೋಚಿರುವುದು ವರದಿಯಾಗಿದೆ. ಈ ಕುರಿತು ಕೆ.ಆರ್ ಸಾಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

error: Content is protected !!

Join the Group

Join WhatsApp Group