➤ಧಾರಾಕಾರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತ 

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.12  ಬೆಂಗಳೂರಿನಲ್ಲಿ ಧಾರಾಕಾರ ಮಳೆಯಿಂದಾಗಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದ್ದು, ವ್ಯಾಪಾರ ವಹಿವಾಟುಗಳಿಗೆ ಸಂಕಷ್ಟವಾಗಿದೆ ಎಂದು ತಿಳಿದುಬಂದಿದೆ.

ವಾರದ ಆರಂಭದಲ್ಲೇ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತವಾಗಿದೆ ಎಂದು ತಿಳಿದುಬಂದಿದೆ.

ಜಿಟಿ ಜಿಟಿ ಮಳೆ ಮುಂದುವರೆದಿದ್ದು, ಚಳಿಯಿಂದ ತತ್ತರಿಸಿದ ಜನರಿಗೆ ಸೈಕ್ಲೋನ್ ಸಂಕಟ ಶುರುವಾಗಿದೆ.

ಚಳಿ ಜೊತೆಗೆ ಮೋಡ ಕವಿದ ವಾತಾವರಣ ಮುಂದುವರೆಯಲಿದೆ. ಚಂಡಮಾರುತದ ಎಫೆಕ್ಟ್ ದಕ್ಷಿಣ ಜಿಲ್ಲೆಗಳಲ್ಲಿ ಆಗಲಿದ್ದು, ಇಂದು ಮತ್ತು ನಾಳೆ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.

Also Read  ತೆರಿಗೆ ವಂಚಕರನ್ನು ಪತ್ತೆಹಚ್ಚಲು ಡಿಜಿ ಯಾತ್ರಾ ದತ್ತಾಂಶ ಬಳಕೆ

 

 

 

 

 

error: Content is protected !!
Scroll to Top