ಕುಮಾರಧಾರ ನದಿಗೆ ಸ್ನಾನಕ್ಕಿಳಿದ ವಿದ್ಯಾರ್ಥಿ ನೀರುಪಾಲು

(ನ್ಯೂಸ್ ಕಡಬ) newskadaba.com ಪುತ್ತೂರು, ನ.22. ಕುಮಾರಧಾರ ನದಿಯಲ್ಲಿ ಸ್ನಾನಕ್ಕೆಂದು ಇಳಿದ ವಿದ್ಯಾರ್ಥಿಯೋರ್ವ ನೀರುಪಾಲಾದ ಘಟನೆ ಬುಧವಾರ ಸಂಜೆ ಪುತ್ತೂರಿನ ಅಂಬ್ರಿಗೇರಿ ಎಂಬಲ್ಲಿ ನಡೆದಿದೆ.

ನೀರುಪಾಲಾದ ವಿದ್ಯಾರ್ಥಿಯನ್ನು ನಗರದ ವಿವೇಕಾನಂದ ಕಾಲೇಜಿನ ಇಂಜಿನಿಯರಿಂಗ್ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿ ಹೇಮಂತ್ ಎಂದು ಗುರುತಿಸಲಾಗಿದೆ.

ಹೇಮಂತ್ ತನ್ನ ಐವರು ಸಹಪಾಠಿಗಳೊಂದಿಗೆ ಪುತ್ತೂರಿನ ಬೆಳ್ಳಿಪ್ಪಾಡಿ ಗ್ರಾಮದ ಕಟಾರ ಎಂಬಲ್ಲಿನ ಅಂಬ್ರಿಗೇರಿಯಲ್ಲಿ ಹರಿಯುತ್ತಿರುವ ಕುಮಾರಧಾರ
ನದಿಗೆ ಸ್ನಾನಕ್ಕೆಂದು ತೆರಳಿದ್ದು, ನೀರಿನಲ್ಲಿ ಕಣ್ಮರೆಯಾಗಿದ್ದಾನೆ ಎನ್ನಲಾಗಿದೆ.

Also Read  ಖಾಸಗಿ ಬಸ್ ಒಂದು ಪಲ್ಟಿಯಾಗಿ ಐವರ ಮರಣ, ಗಾಯಗೊಂಡ 20ಕ್ಕೂ ಹೆಚ್ಚು ಜನ

ಘಟನಾ ಸ್ಥಳಕ್ಕೆ ಪುತ್ತೂರು ಪೊಲೀಸರು ಮತ್ತು ಅಗ್ನಿಶಾಮಕ ದಳದವರು ತೆರಳಿದ್ದು, ಶೋಧ ಕಾರ್ಯ ಮುಂದುವರಿಸಿದ್ದಾರೆ.

error: Content is protected !!
Scroll to Top