ಕೆಮ್ಮಾರ: ಭೀಕರ ಅಪಘಾತಕ್ಕೆ ಇಬ್ಬರು ಬಲಿ, ಮೂವರು ಗಂಭೀರ ► ಸೇತುವೆಯ ತಡೆಗೋಡೆಗೆ ಗುದ್ದಿದ ಜೀಪ್

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ನ.23. ಜೀಪೊಂದು ಸೇತುವೆಯ ತಡೆಗೋಡೆಗೆ ಢಿಕ್ಕಿ ಹೊಡೆದು ಉಂಟಾದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟು ಮೂವರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಮ್ಮಾರ ಎಂಬಲ್ಲಿ ಗುರುವಾರ ತಡ ರಾತ್ರಿ ನಡೆದಿದೆ.

ಮೃತರನ್ನು ಕಾಣಿಯೂರಿನ ಕಟ್ಟತ್ತಾರು ನಿವಾಸಿಗಳಾದ ಶಿವಪ್ಪ ಮತ್ತು ಸುಶೀಲಾ ಎಂದು ಗುರುತಿಸಲಾಗಿದೆ. ಇವರು ತಮ್ಮದೇ ಜೀಪಿನಲ್ಲಿ ಉಪ್ಪಿನಂಗಡಿಯಿಂದ ಕಾಣಿಯೂರಿಗೆ ಆಲಂಕಾರು ಶಾಂತಿಮೊಗರು ಮೂಲಕ ತೆರಳುತ್ತಿರುವಾಗ ಜೀಪು ಚಾಲಕನ ನಿಯಂತ್ರಣ ತಪ್ಪಿ ಕೆಮ್ಮಾರ ಸೇತುವೆಯ ತಡೆಗೋಡೆಗೆ ಗುದ್ದಿ ರಸ್ತೆಯಲ್ಲಿ ಅಡ್ಡವಾಗಿ ನಿಂತಿದೆ.

ಘಟನೆಯಿಂದಾಗಿ ಚಾಲಕನ ತಾಯಿ ಸುಶೀಲಾ ಹಾಗೂ ದೊಡ್ಡಪ್ಪ ಶಿವಪ್ಪ ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರ ಗಾಯಗೊಂಡಿದ್ದ ಮೂವರನ್ನು ಪುತ್ತೂರು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

error: Content is protected !!

Join the Group

Join WhatsApp Group