➤ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಘಟಿಕೋತ್ಸವ ➤ ಮೂವರು ಸಾಧಕಿಯರಿಗೆ ಗೌರವ ಡಾಕ್ಟರೇಟ್

ವಿಜಯಪುರ:  ಡಿ.19 ರಂದು ನಡೆದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ 13 ಮತ್ತು 14ನೇ ಘಟಿಕೋತ್ಸವದಲ್ಲಿ ಮೂವರು ಮಹಿಳಾ ಸಾಧಕಿಯರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತು.

ಡಿ.19 ರಂದು ಬೆಂಗಳೂರಿನ ಸುಮಂಗಲಿ ಸೇವಾಶ್ರಮದ ಸಮಾಜ ಸೇವಕಿ ಡಾ.ಎಸ್.ಜಿ. ಸುಶೀಲಮ್ಮ, ಮೌಲ್ಯಾಧಾರಿತ ಶಿಕ್ಷಣ ವ್ಯವಸ್ಥೆಯ ಪ್ರಚಾರದಲ್ಲಿ ತೊಡಗಿರುವ ಗುಜರಾತ್ ನ ಪುನರುತ್ಥಾನ ವಿದ್ಯಾಪೀಠದ ಕುಲಪತಿ ಇಂದುಮತಿ ಕಾಟದಾರೆ ಮತ್ತು ಬೀದರ್ ನ ಗುರುನಾನಕ್ ಸಮೂಹ ಶಿಕ್ಷಣ ವ್ಯವಸ್ಥೆಯ ಉಪಾಧ್ಯಕ್ಷೆ ರೇಷ್ಮಾ ಕೌರ ಈ ಮೂವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿದರು.

Scroll to Top