ಜೋಡಿ ಕೊಲೆ ಪ್ರಕರಣ ➤ ಮೂವರ ಬಂಧನ

crime, arrest, suspected

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 21. ಕೋರಮಂಗಲ ಜೋಡಿ ಕೊಲೆ ಪ್ರಕರಣ ಭೇಧಿಸಿದ ಪೊಲೀಸರು ಪ್ರಮುಖ ಆರೋಪಿ ಉದ್ಯಮಿಯ ಮಾಜಿ ಕಾರು ಚಾಲಕ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ.

ಬಂಧಿತ ಆರೊಪಿಯನ್ನು ಜಗದೀಶ್ (24), ಅಭಿಷೇಕ್ (22) ಮತ್ತು ಆತನ ಸಹೋದರ ಕಿರಣ್ (19) ಎಂದು ಗುರುತಿಸಲಾಗಿದೆ. ಉದ್ಯಮಿ ರಾಜಗೋಪಾಲ್ ರೆಡ್ಡಿ ಅವರ ಮಾಜಿ ಚಾಲಕನಾಗಿದ್ದ ಜಗದೀಶ್ ಪ್ರಕರಣದ ಪ್ರಮುಖ ಆರೋಪಿ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಬಂಧಿತ ಆರೋಪಿಗಳಿಂದ ರೂ. 5 ಲಕ್ಷ ನಗದು, ವಿದೇಶಿ ಕರೆನ್ಸಿ ಸೇರಿದಂತೆ ಬೆಲೆಬಾಳುವ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ ರವರು ತಿಳಿಸಿದ್ದಾರೆ.

Also Read  3 ನಿಮಿಷದಲ್ಲಿ 184 ಸೆಲ್ಫಿ    ➤  ನಟ ಅಕ್ಷಯ್‌ ಕುಮಾರ್‌ ವಿಶ್ವ ದಾಖಲೆ..!

 

error: Content is protected !!
Scroll to Top