ರಕ್ತದಲ್ಲಿ ಪತ್ರ ಬರೆದು ಅಸಮಾಧಾನ ಹೊರ ಹಾಕಿದ ರೈಲ್ವೇ ಕಾರ್ಮಿಕರು…!!!     



(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಡಿ. 21. ರೈಲ್ವೇ ನಿಲ್ದಾಣದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸ್ವಚ್ಚತಾ ಕಾರ್ಮಿಕರನ್ನು ಕಾನೂನುಬಾಹಿರ ತೆಗೆದುಹಾಕಿದನ್ನು ಖಂಡಿಸಿ ಕಾರ್ಮಿಕರು ರಕ್ತದಲ್ಲಿ ಪತ್ರಬರೆಯುವ ಚಳುವಳಿ ನಡೆಸಿದ ಘಟನೆ ಹುಬ್ಬಳ್ಳಿಯಲ್ಲಿ ವರದಿಯಾಗಿದೆ.





ಇದು ರೈಲ್ವೇ ಇಲಾಖೆಯು ದಲಿತರ ಮೇಲೆ ಮಾಡಿರುವಂತಹ ಅಮಾನವೀಯ ಶೋಷಣೆಯಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.  ಸ್ವಚ್ಚತಾ ಕಾರ್ಮಿಕರ ಕುರಿತು ರೈಲ್ವೇ ಅಧಿಕಾರಿಗಳಿಗೆ ಪತ್ರ ಬರೆದರೂ ಯಾವುದೇ ಪ್ರಯೋಜನವಾಗಿಲ್ಲ. ಕಾರ್ಮಿಕ ಇಲಾಖೆಯು ಯಾವುದೇ ಸ್ಪಂದನೆ ನೀಡಿಲ್ಲ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.






 

error: Content is protected !!
Scroll to Top