ವಿಟ್ಲ: ಬೈಕಿಗೆ ಹಿಂದಿನಿಂದ ಢಿಕ್ಕಿ ಹೊಡೆದ ಲಾರಿ ► ನಿವೃತ್ತ ಯೋಧ ಮೃತ್ಯು

(ನ್ಯೂಸ್ ಕಡಬ) newskadaba.com ವಿಟ್ಲ, ನ.29. ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ, ನಿವೃತ್ತ ಯೋಧ ಸ್ಥಳದಲ್ಲೇ ಮೃತಪಟ್ಟ ಘಟನೆ ಇಲ್ಲಿನ ಕಾಶಿಮಠ ಎಂಬಲ್ಲಿ ಬುಧವಾರದಂದು ನಡೆದಿದೆ.

ಮೃತರನ್ನು ಕನ್ಯಾನ ಮೂಲದ ಅಂಗ್ರಿ ನಿವಾಸಿ ವೆಂಕಪ್ಪ ಮೂಲ್ಯ ಎಂದು ಗುರುತಿಸಲಾಗಿದೆ. ಅವರು ತನ್ನ ಬೈಕಿನಲ್ಲಿ ವಿಟ್ಲಕ್ಕೆ ಬರುತ್ತಿದ್ದ ಸಂದರ್ಭ ಲಾರಿಯೊಂದು ವೆಂಕಪ್ಪ ಮೂಲ್ಯರಿದ್ದ ಬೈಕಿನ ಹಿಂಭಾಗಕ್ಕೆ ಢಿಕ್ಕಿ ಹೊಡೆದಿದಿದ್ದು, ರಸ್ತೆಗೆಸೆಯಲ್ಪಟ್ಟ ವೆಂಕಪ್ಪರ ತಲೆಯ ಮೇಲೆ ಲಾರಿಯ ಚಕ್ರ ಹರಿದಿದೆ. ತಕ್ಷಣವೇ ವೆಂಕಪ್ಪ ಮೂಲ್ಯರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅದಾಗಲೇ ಅವರು ಮೃತಪಟ್ಟಿದ್ದರು.

Also Read  ಕಡಬ: ಬಿಜೆಪಿ ಸರಕಾರ 8 ವರ್ಷ ಪೂರೈಸಿದ ಹಿನ್ನೆಲೆ ತುರ್ತು ಪರಿಸ್ಥಿತಿಯ ಕರಾಳ ನೆನಪುಗಳ ಹೋರಾಟಗಾರರಿಗೆ ಗೌರವಾರ್ಪಣೆ

ಭಾರತೀಯ ಸೇನೆಯಲ್ಲಿ ಸೈನಿಕರಾಗಿದ್ದ ವೆಂಕಪ್ಪ ಮೂಲ್ಯ ಅವರು ನಾಲ್ಕು ವರ್ಷಗಳ ಹಿಂದೆ ಸೇವಾ ನಿವೃತ್ತಿಯಾಗಿದ್ದರು. ಘಟನೆಯ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!
Scroll to Top