ಬೆಳ್ತಂಗಡಿ: ನಗ-ನಗದು ಕಳವು ➤ ದೂರು ದಾಖಲು 

Theft, crime, Robbery

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ. 27. ಮನೆಯಲ್ಲಿ ಯಾರೂ ಇಲ್ಲದ ವೇಳೆ ಒಳನುಗ್ಗಿದ ಕಳ್ಳರು ನಗ-ನಗದು ದೋಚಿ ಪರಾರಿಯಾದ ಘಟನೆ ತಾಲೂಕಿನ ಮೊಗ್ರು ಗ್ರಾಮದ ಮುರ ಎಂಬಲ್ಲಿ ಸಂಭವಿಸಿದೆ.

ಇಲ್ಲಿನ ಮೀನಾಕ್ಷಿ ಎಂಬವರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಹಿಂಬಾಗಿಲ ಮೂಲಕ ಒಳನುಗ್ಗಿದ ಕಳ್ಳರು ಮನೆಯ ಕಪಾಟಿನಲ್ಲಿರಿಸಿದ್ದ ಎರಡೂವರೆ ಪವನ್ ಚಿನ್ನದ ಸರ ಹಾಗೂ 32,500 ರೂ. ನಗದನ್ನು ದೋಚಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಮೀನಾಕ್ಷಿಯವರು ಗುರುವಾಯನಕೆರೆಯಲ್ಲಿರುವ ತನ್ನ ಮಗಳ ಮನೆಗೆ ತೆರಳಿ, ವಾಪಸ್ ಬಂದಾಗ ಕಳವು ಕೃತ್ಯ ಬೆಳಕಿಗೆ ಬಂದಿದೆ. ಈ ಕುರಿತು ಮೀನಾಕ್ಷಿಯವರು ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.

 

error: Content is protected !!

Join the Group

Join WhatsApp Group