ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಸಿಪಿಐಎಂ ಕಾರ್ಯಕರ್ತರಿಂದ ಹಲ್ಲೆ ➤ ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಬದಿಯಡ್ಕ, ಡಿ. 27. ಸಿಪಿಐಎಂ ಕಾರ್ಯಕರ್ತರು ಮಾರಕಾಸ್ತ್ರಗಳಿಂದ ದಾಳಿ ಮಾಡಿದ ಪರಿಣಾಮ ಇಬ್ಬರು ಬಿಜೆಪಿ ಕಾರ್ಯಕರ್ತರು ಗಾಯಗೊಂಡ ಘಟನೆ ಎಣ್ಮಕಜೆ ಪಂಚಾಯತ್ ವ್ಯಾಪ್ತಿಯ ಮಣಿಯಂಪಾರೆ ಎಂಬಲ್ಲಿ ನಡೆದಿದೆ.

ಗಾಯಗೊಂಡವರನ್ನು ಮಣಿಯಂಪಾರೆ ಜಯಂತ ನಾಯ್ಕರ ಮಗ ಸೂರ್ಯೋದಯ ಸಂಟನಡ್ಕ, ಐತಪ್ಪ ನಾಯ್ಕರ ಮಗ ರೂಪೇಶ್ ಎಂದು ಗುರುತಿಸಲಾಗಿದೆ. 6 ಮಂದಿ ಸಿಪಿಐಎಂ ಕಾರ್ಯಕರ್ತರು ಮಾರಕಾಸ್ತ್ರಗಳಿಂದ ಆಕ್ರಮಿಸಿ ಗಾಯಗೊಳಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಗಾಯಾಳುಗಳನ್ನು ಕಾಸರಗೋಡು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

error: Content is protected !!

Join the Group

Join WhatsApp Group