ಬೆಳ್ತಂಗಡಿ: ಬೊಲೆರೋ ಹಾಗೂ ರಿಕ್ಷಾ ನಡುವೆ ಅಪಘಾತ ➤ ನಾಲ್ವರಿಗೆ ಗಾಯ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ. 29. ಓವರ್ ಟೇಕ್ ಮಾಡುವ ಭರದಲ್ಲಿ ಬೊಲೆರೋ‌ ವಾಹನ ಹಾಗೂ ಆಟೋ ನಡುವೆ ಡಿಕ್ಕಿ ಸಂಭವಿಸಿ, ಆಟೋದಲ್ಲಿದ್ದ ನಾಲ್ವರು ಗಾಯಗೊಂಡ ಘಟನೆ ಉಜಿರೆಯ ಓಡಲ ಕ್ರಾಸ್ ನಲ್ಲಿ ನಡೆದಿದೆ.

ಗಾಯಗೊಂಡವರನ್ನು ರಿಕ್ಷಾ ಚಾಲಕ ಗುರಿಪಳ್ಳ ನಿವಾಸಿ ಪ್ರವೀಣ್(42), ಕುಪ್ಪೆಟ್ಟಿ ನಿವಾಸಿ ರಫೀಕ್(55) ಕೊಟ್ಟಿಗೆಹಾರ ನಿವಾಸಿ ಸುಹೈಲ್ (30) ಹಾಗೂ ಕೊಟ್ಟಿಗೆಹಾರ ನಿವಾಸಿ ಚೇತನ್ (27) ಎಂದು ಗುರತಿಸಲಾಗಿದೆ. ಈ ಪೈಕಿ ಸುಹೈಲ್ ತಲೆಯ ಭಾಗಕ್ಕೆ ಹೆಚ್ಚು ಗಾಯವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಿ ಉಳಿದವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಾಲು ಕಡೆಯಿಂದ ಉಜಿರೆ ಕಡೆಗೆ ಹೋಗುತ್ತಿದ್ದ ಆಟೋ ರಿಕ್ಷಾಕ್ಕೆ ಎದುರಿನಿಂದ ಬಂದ ಬೊಲೋರೊ ವಾಹನ ಓವರ್ ಟೇಕ್ ಮಾಡುವ ಭರದಲ್ಲಿ ಢಿಕ್ಕಿ ಹೊಡೆದಿದೆ. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Also Read  ಎರಡನೇ ಮಗುವಿನ ತಂದೆಯಾದ ಟೀಂ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾ..!

error: Content is protected !!
Scroll to Top