(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 31. ಕೆಲದಿನಗಳ ಹಿಂದೆ ನಡೆದಿದ್ದ ಬಾಗಲಕೋಟೆ ಮೂಲದ ಮಂಜುನಾಥ್ ಬಾಳಪ್ಪ ಜಮಖಂಡಿ (21) ಕೊಲೆ ಪ್ರಕರಣದಲ್ಲಿ ಆತನ ಗೆಳತಿ ಸರೋಜಾ ದೇಸಾಯಿ (29) ಯನ್ನು ಕೆಂಪಾಪುರ ಅಗ್ರಹಾರ ಠಾಣೆ ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ.

ಮಧ್ಯರಾತ್ರಿ ಮಾಗಡಿ ರಸ್ತೆಯ ಮನೆಯೊಂದರ ಮುಂಭಾಗ ಅಪರಿಚಿತ ಯುವಕ ರಕ್ತದ ಮಡುವಿನಲ್ಲಿ ಕೊಲೆಯಾಗಿ ಬಿದ್ದಿದ್ದ. ಆರಂಭದಲ್ಲಿ ಕೊಲೆಯಾದ ವ್ಯಕ್ತಿಯ ಗುರುತು ಪತ್ತೆಯಾಗಿರಲಿಲ್ಲ. ನಂತರ ತನಿಖೆ ಚುರುಕುಗೊಳಿಸಿದ ಪೊಲೀಸರು ಪ್ರಕರಣದ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.














