ವಿದ್ಯುತ್ ಸ್ಪರ್ಶಿಸಿ ನೆನಪಿನ ಶಕ್ತಿ ಕಳೆದುಕೊಂಡ ಬಾಲಕ



(ನ್ಯೂಸ್ ಕಡಬ) newskadaba.com ಕೊಪ್ಪಳ, ಡಿ. 31. 10 ವರ್ಷದ ಬಾಲಕನಿಗೆ ವಿದ್ಯುತ್ ತಗುಲಿ, ನೆನಪಿನ ಶಕ್ತಿಯನ್ನು ಕಳೆದುಕೊಂಡ ಘಟನೆ ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಮಿಲಾಪುರ ಗ್ರಾಮದಲ್ಲಿ ನಡೆದಿದೆ.







 

ಗಾಯಗೊಂಡ ಬಾಲಕನನ್ನು ವೀರೇಶ್ ಎಂದು ಗುರುತಿಸಲಾಗಿದೆ. ಆರೋಪಿಯನ್ನು ಮಹದೇವಪ್ಪ ಎಂದು ಗುರುತಿಸಲಾಗಿದೆ. ಬಾಲಕ ಆಟವಾಡುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶವಾಗಿತ್ತು. ಬಾಲಕ ವಿದ್ಯುತ್ ಆಘಾತದ ನಂತರ ಜ್ಞಾಪಕ ಶಕ್ತಿಯನ್ನು ಕಳೆದುಕೊಂಡಿದ್ದಲ್ಲದೇ, ಕೈಗೆ ಗಂಭೀರವಾದ ಸುಟ್ಟ ಗಾಯಗಳಾಗಿವೆ. ಆಟದ ಮೈದಾನದಲ್ಲಿ ವಿದ್ಯುತ್ ತಂತಿಗಳು ಹರಡಿಕೊಂಡಿವೆ ಎಂದು ಪೊಲೀಸರು ತಿಳಿಸಿದ್ದಾರೆ. ನಿರ್ಲಕ್ಷ್ಯ ವಹಿಸಿರುವ ಜಿಲ್ಲಾ ಪಂಚಾಯತ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಈ ಕುರಿತು ಗುತ್ತಿಗೆದಾರನ ವಿರುದ್ಧ ಕಾರಟಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.






error: Content is protected !!
Scroll to Top