ಶಿರಾಡಿ: ಆನೆ ದಾಳಿಗೆ ಮೃತಪಟ್ಟ ವ್ಯಕ್ತಿ ಮನೆಗೆ ಸಚಿವ ಅಂಗಾರ ಭೇಟಿ ➤ ಗಾಯಾಳುವಿನ ಚಿಕಿತ್ಸೆ ವೆಚ್ಚ ಭರಿಸುವಂತೆ ಸೂಚನೆ

(ನ್ಯೂಸ್ ಕಡಬ) newskadaba.com ಗುಂಡ್ಯ, ಜ. 02. ಶಿರಾಡಿಯಲ್ಲಿ ಆನೆ ದಾಳಿಗೆ ಒಳಗಾದ ವ್ಯಕ್ತಿಗಳ ಮನೆಗೆ ಸಚಿವ ಎಸ್. ಅಂಗಾರ ಅವರು ಭೇಟಿ ನೀಡಿ ಸಾಂತ್ವನ ಹೇಳಿದರು.

ಘಟನೆ ಕುರಿತು ಅರಣ್ಯ ಇಲಾಖೆಯ ಡಿಸಿಎಫ್ ಅವರನ್ನು ಸಂಪರ್ಕಿಸಿ ಇಲಾಖಾ ವತಿಯಿಂದ ಗಾಯಾಳುಗಳಿಗೆ ಚಿಕಿತ್ಸೆ ನೀಡುವಂತೆ ಸೂಚಿಸಿದರು. ರಸ್ತೆಯಲ್ಲಿ ಹೋಗುತ್ತಿದ್ದ ತಂದೆ ಮಗನ ಮೇಲೆ ಒಂಟಿ ಸಲಗ  ಡಿ. 31 ರಂದು  ದಾಳಿ ಮಾಡಿತ್ತು. ಈ ಘಟನೆಯಲ್ಲಿ ಶಿರಾಡಿ ಗ್ರಾಮದ ಜನತಾ ಕಾಲನಿ ನಿವಾಸಿಗಳಾದ ತಿಮ್ಮಪ್ಪ ಮತ್ತು ಅವರ ಪುತ್ರ ಶರಣ್ ದಾಳಿಗೆ ಒಳಗಾಗಿದ್ದರು. ತಂದೆ ಸಾವಿಗೀಡಾದರೆ ಮಗ ಪ್ರಾಣಾಪಾಯದಿಂದ ಪಾರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Also Read  ಮಂಗಳೂರು: ವಿಮಾನ ನಿಲ್ದಾಣದಲ್ಲಿ ತಪ್ಪಿದ ಭಾರೀ ಅವಘಡ ► ನಿಟ್ಟುಸಿರು ಬಿಟ್ಟ ಪ್ರಯಾಣಿಕರು

error: Content is protected !!
Scroll to Top