ಅನಿಲ ಸೋರಿಕೆ ➤ ನಾಲ್ವರಿಗೆ ಗಾಯ

(ನ್ಯೂಸ್ ಕಡಬ) newskadaba.com .   ಹುಬ್ಬಳ್ಳಿ, ಜ. 03:  ಅಡುಗೆ ಅನಿಲ ಸೋರಿಕೆಯಿಂದಾಗಿ ಅಗ್ನಿ ಅಪಘಡ ಸಂಭವಿಸಿದ  ಪರಿಣಾಮ ನಾಲ್ವರು ಗಾಯಗೊಂಡ ಘಟನೆ ಹುಬ್ಬಳ್ಳಿ ಜಿಲ್ಲೆಯ ವೀರಾಪೂರ ಓಣಿಯ ಶ್ರೀ ಗಣಪತಿ ಈಶ್ವರ ದೇವಸ್ಥಾನದಲ್ಲಿ ಸಂಭವಿಸಿದೆ.

ಈ ಘಟನೆಯಿಂದ ದೇವಸ್ಥಾನದ ಅರ್ಚಕ, ಮಗು ಹಾಗೂ ಇಬ್ಬರು ಮಹಿಳೆಯರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಮಗು ಹಾಗೂ ಇಬ್ಬರು ಮಹಿಳೆಯರು ದೇವರ ದರ್ಶನಕ್ಕೆ ಆಗಮಿಸಿದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಬೆಂಡಿಗೇರಿ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.

Also Read  'ಓಖೀ' ಚಂಡಮಾರುತಕ್ಕೆ ಮಂಗಳೂರು ತತ್ತರ ► ಉಳ್ಳಾಲ ಪರಿಸರದಲ್ಲಿ ಮನೆಗೆ ನುಗ್ಗಿದ ಸಮುದ್ರದ ನೀರು

error: Content is protected !!
Scroll to Top