ಪುತ್ತೂರು: ಬೈಕ್ ಢಿಕ್ಕಿ- ಬಾಲಕನಿಗೆ ಗಾಯ ➤ ಮಾನವೀಯತೆ ಮೆರೆದ ಕಾಂಗ್ರೆಸ್ ವಲಯಾಧ್ಯಕ್ಷ

(ನ್ಯೂಸ್ ಕಡಬ) newskadaba.com ಪುತ್ತೂರು, ಜ. 06. ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಗೆ ಬೈಕ್ ಡಿಕ್ಕಿ ಹೊಡೆದು ಬಾಲಕ ಗಾಯಗೊಂಡ ಘಟನೆ ಕುಂಬ್ರದಲ್ಲಿ ನಡೆದಿದೆ.

ಗಾಯಗೊಂಡ ಬಾಲಕನನ್ನು ಕೊಯಿಲತ್ತಡ್ಕ ಜನತಾ ಕಾಲನಿ ನಿವಾಸಿ ಖೈರುನ್ನಿಸಾ ಎಂಬವರ ಪುತ್ರ ಶಿಹಾಬ್ ಎಂದು ಗುರುತಿಸಲಾಗಿದೆ. ಈತ ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ವೇಳೆ ಅತಿವೇಗದಿಂದ ಬಂದ ಕೇರಳ ನೋಂದಣಿಯ ಬೈಕ್ ಡಿಕ್ಕಿ ಹೊಡೆದು ಗಾಯಗೊಂಡಿದ್ದ ಈತನನ್ನು ಕುಂಬ್ರ ವಲಯ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಪೂಜಾರಿ ಬೊಳ್ಳಾಡಿ ತಕ್ಷಣವೇ ಆಸ್ಪತ್ರೆಗೆ ಸಾಗಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

Scroll to Top