ರಾಷ್ಟ್ರೀಯ ಯುವಜನ ಉತ್ಸವ ➤ ಲೋಗೋ ಮತ್ತು ಮ್ಯಾಸ್ಕಾಟ್ ಬಿಡುಗಡೆಗೊಳಿಸಿದ ಬಸವರಾಜ ಬೊಮ್ಮಾಯಿ

(ನ್ಯೂಸ್ ಕಡಬ) newskadaba.com. ಬೆಂಗಳೂರು, ಜ.07  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜನವರಿ 12ರಿಂದ ಹುಬ್ಬಳ್ಳಿ-ಧಾರವಾಡದಲ್ಲಿ ನಡೆಯಲಿರುವ ರಾಷ್ಟ್ರೀಯ ಯುವಜನ ಉತ್ಸವದ ಲೋಗೋ ಮತ್ತು ಮ್ಯಾಸ್ಕಾಟ್ ಅನ್ನು ಶನಿವಾರ ಬಿಡುಗಡೆ ಮಾಡಿದರು.

ಈ ವರ್ಚುವಲ್ ಕಾರ್ಯಕ್ರಮದಲ್ಲಿ ಕೇಂದ್ರ ಕಲ್ಲಿದ್ದಲು, ಗಣಿ ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಹಾಗೂ ಕೇಂದ್ರ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ ಹಾಗೂ ರಾಜ್ಯದ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ನಾರಾಯಣಗೌಡ ಮತ್ತು ಖ್ಯಾತ ನಟಿ ತಾರಾ ಅನೂರಾಧ ಭಾಗವಹಿಸಿದ್ದರು.

Scroll to Top