ಎರಡು ತಿಂಗಳ ಬಳಿಕ ನಾಗರಿಕ ಕಾಮಗಾರಿಗಳ ಪರಿಶೀಲನೆ ಕಾರ್ಯ ಪುನರ್ ಆರಂಭ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.07. ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಎರಡು ತಿಂಗಳ ವಿರಾಮದ ಬಳಿಕ ನಾಗರಿಕ ಕಾಮಗಾರಿಗಳ ಪರಿಶೀಲನೆ ಕಾರ್ಯವನ್ನು ಪುನರ್ ಆರಂಭಿಸಿದ್ದಾರೆ ಎಂದು ವರದಿ ತಿಳಿಸಿದೆ.

ಪೂರ್ವ ವಲಯದ ಮಲ್ಲೇಶ್ವರಂ ಉಪ ವಿಭಾಗೀಯ ವ್ಯಾಪ್ತಿಯಲ್ಲಿ ಅನುಷ್ಟಾನವಾಗುತ್ತಿರುವ ಕಾಮಗಾರಿಗಳನ್ನು ಪರಿಶೀಲಿಸಿದ ಗಿರಿನಾಥ್, ಎಂಇಎಸ್ ಕಾಲೇಜ್ ರಸ್ತೆಯಲ್ಲಿ ಸರಿಯಾದ ಪಾದಚಾರಿ ಮಾರ್ಗವನ್ನು ನಿರ್ಮಿಸಬೇಕು, ಒಳಚರಂಡಿಯಿಂದ ಹೂಳು ತೆಗೆಯ ಬೇಕು ಎಂದು ಎಂಜಿನಿಯರ್ ಹಾಗೂ ಗುತ್ತಿಗೆದಾರರಿಗೆ ನಿರ್ದೇಶಿಸಿದರು ಎನ್ನಲಾಗಿದೆ.

 

 

Scroll to Top