ಬಿಗ್ ಬಾಸ್ ವಿನ್ನರ್ ರೂಪೇಶ್ ಮಂಗಳೂರು ಪೊಲೀಸ್ ಆಯುಕ್ತರ ಕಚೇರಿಗೆ ಭೇಟಿ

(ನ್ಯೂಸ್ ಕಡಬ)newskadaba.com  ಮಂಗಳೂರು, ಜ.09. ಬಿಗ್ ಬಾಸ್ ವಿನ್ನರ್ ರೂಪೇಶ್ ಶೆಟ್ಟಿ ಮಂಗಳೂರು ಪೊಲೀಸ್ ಆಯುಕ್ತರ ಕೋರಿಕೆಯಂತೆ ಆಯುಕ್ತರ ಕಚೇರಿಗೆ ಆಗಮಿಸಿದರು ಎನ್ನಲಾಗಿದೆ.

ಪೊಲೀಸ್ ಅಧಿಕಾರಿ, ಸಿಬ್ಬಂದಿಗಳು  ರೂಪೇಶ್ ಅವರಿಗೆ ಶುಭಾಶಯ ಕೋರಿದರು. ರೂಪೇಶ್ ತುಳುವಿನಲ್ಲಿ ಮಾತನಾಡಿದವರೊಂದಿಗೆ ತುಳುವಿನಲ್ಲಿಯೇ ಪ್ರತಿಕ್ರಿಯಿಸಿದರು ಎಂದು ತಿಳಿದುಬಂದಿದೆ. ರೂಪೇಶ್ ಅವರಿಗೆ ಅಭಿನಂದನೆ ಸಲ್ಲಿಸಿದ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ನಾವು ಆಹ್ವಾನಿಸಿದ ಕೂಡಲೇ ರೂಪೇಶ್ ಒಪ್ಪಿಕೊಂಡು ಬಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ ಎನ್ನಲಾಗಿದೆ.

Also Read  ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ ➤ ಕಡಬ ತಾಲೂಕಿನ ನಾಲ್ವರು ಶಿಕ್ಷಕರು ಆಯ್ಕೆ

 

 

error: Content is protected !!