ಹಳಿ ದಾಟುತ್ತಿದ್ದ ವೇಳೆ ರೈಲು ಢಿಕ್ಕಿ ➤ ಕರಾವಳಿ ಪೊಲೀಸ್ ಠಾಣೆಯ ವಾಹನ ಚಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು, ಜ. 09. ರೈಲು ಢಿಕ್ಕಿ ಹೊಡೆದ ಪರಿಣಾಮ ಕರಾವಳಿ ಪೊಲೀಸ್ ಠಾಣೆಯ ವಾಹನ ಚಾಲಕನೋರ್ವ ಮೃತಪಟ್ಟ ಘಟನೆ ಉಪ್ಪಳದಲ್ಲಿ ನಡೆದಿದೆ.

ಮೃತರನ್ನು ಕುಂಬಳೆ ಕರಾವಳಿ ಪೊಲೀಸ್ ಠಾಣೆಯ ವಾಹನ ಚಾಲಕ ಉಣ್ಣಿ ಕೃಷ್ಣನ್(28) ಎಂದು ಗುರುತಿಸಲಾಗಿದೆ. ಇವರು ಉಪ್ಪಳ ರೈಲು ನಿಲ್ದಾಣದಲ್ಲಿ ಇಳಿದು ಮುಸೋಡಿಯಲ್ಲಿರುವ ಕರಾವಳಿ ಪೊಲೀಸ್ ಠಾಣೆಗೆ ರೈಲು ಹಳಿಯ ಮೂಲಕ ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ಮಂಗಳೂರು ಕಡೆಯಿಂದ ಬರುತ್ತಿದ್ದ ರೈಲು ಡಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರ ಗಾಯಗೊಂಡ ಅವರನ್ನು ಉಪ್ಪಳದ ಆಸ್ಪತ್ರೆಗೆ ತಲುಪಿಸಿದರೂ ಆಗಲೇ ಮೃತಪಟ್ಟಿದ್ದರು ಎನ್ನಲಾಗಿದೆ. ಈ ಕುರಿತು ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Also Read  ಸುಳ್ಯ: ಕೆಎಸ್ಆರ್‌ಟಿಸಿ ಬಸ್ ಮತ್ತು ಲಾರಿ ನಡುವೆ ಅಪಘಾತ   ➤ ಪ್ರಯಾಣಿಕರು ಅಪಾಯದಿಂದ ಪಾರು

error: Content is protected !!
Scroll to Top