ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಶೀತಮಾರುತ ಬೀಸುವ ಸಾಧ್ಯತೆ ➤ ಹವಾಮಾನ ಇಲಾಖೆ ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 10. ಉತ್ತರ ಭಾರತದಲ್ಲಿ ವ್ಯಾಪಕವಾಗಿ ಬೀಸುತ್ತಿರುವ ಶೀತಗಾಳಿಯ ಪ್ರಭಾವವು ಕರ್ನಾಟಕಕ್ಕೂ ವಿಸ್ತರಿಸುವ ಸಾಧ್ಯತೆಯಿದೆ ಎಂದು ವರದಿ ಪ್ರಕಟನೆ ತಿಳಿಸಿದೆ.

ಈ ಋತುಮಾನದ ಚಳಿಗಾಲದಲ್ಲಿ ಇದೇ ಮೊದಲ ಬಾರಿಗೆ ಹವಾಮಾನ ಇಲಾಖೆಯು ಶಿತಮಾರುತದ ಎಚ್ಚರಿಕೆ ನೀಡಿದೆ. ಕರ್ನಾಟಕದ ಉತ್ತರ ಒಳನಾಡಿನಲ್ಲಿ ಶಿತಗಾಳಿ ಬೀಸುವ ಸಾಧ್ಯತೆಯಿದ್ದು, ಉಷ್ಣಾಂಶವು 5.5 ಡಿಗ್ರಿ ಸೆಲ್ಷಿಯಸ್​ಗೆ ಕುಸಿಯಬಹುದು ಎಂದು ತಿಳಿಸಿದೆ. ಯಾವುದೇ ಎರಡು ಹವಾಮಾನ ಮಾಪಕದ ಕೇಂದ್ರಗಳಲ್ಲಿ ಉಷ್ಣಾಂಶವು 4.5ರಿಂದ 6.5 ಡಿಗ್ರಿ ಸೆಲ್ಷಿಯಸ್​ನಷ್ಟು ಕುಸಿಯುವುದು ದೃಢಪಟ್ಟಾಗ ಅಥವಾ ಉಷ್ಣಾಂಶವು ಕುಸಿದಾಗ ಶೀತ ಮಾರುತದ ಎಚ್ಚರಿಕೆಯನ್ನು ನೀಡಲಾಗುವುದು ಎಂದು ಹವಾಮಾನ ಇಲಾಖೆಯ ವಿಜ್ಞಾನಿಗಳು ಹೇಳಿದ್ದಾರೆ.

error: Content is protected !!

Join the Group

Join WhatsApp Group