ಜ.16ಕ್ಕೆ ಪ್ರಿಯಾಂಕ ಗಾಂಧಿ ಕರ್ನಾಟಕ್ಕೆ ಆಗಮನ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.10. ರಾಜ್ಯದ ಮಹಿಳೆಯರ ಸಬಲೀಕರಣಕ್ಕೆ ಕಾಂಗ್ರೆಸ್‌ ಪಕ್ಷದ ವತಿಯಿಂದ ಜನವರಿ 16ರಂದು ಬೆಂಗಳೂರು ಅರಮನೆ ಮೈದಾನದಲ್ಲಿ ‘ನಾ ನಾಯಕಿ’ ಸಮಾವೇಶವನ್ನು ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಆಗಮಿಸುತ್ತಿದ್ದಾರೆ. ಮಹಿಳೆಯರಿಗಾಗಿ ಪ್ರತ್ಯೇಕ ಪ್ರಣಾಳಿಕೆಯನ್ನು ಅವರು ಬಿಡುಗಡೆ ಮಾಡಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

ಹೆಣ್ಣು ಸಮಾಜದ ಕಣ್ಣು, ಹೆಣ್ಣು ಒಂದು ಶಕ್ತಿಯಾಗಿದ್ದು, ಸಬಲೀಕರಣಕ್ಕೆ ಸಮಾವೇಶ ಹಮ್ಮಿಕೊಂಡಿದ್ದೇವೆ. ಈ ಸಮಾವೇಶ ಆಗಮಿಸಲಿರುವ ಪ್ರಿಯಾಂಕಾ ಅವರು ಸಮಾವೇಶದಲ್ಲಿ ಕಾಂಗ್ರೆಸ್‌ ಪಕ್ಷ ಮಹಿಳೆಯರಿಗೆ ನೀಡುವ ಭರವಸೆಗಳನ್ನು ಘೋಷಣೆ ಮಾಡಲಿದ್ದಾರೆ. ಪ್ರಿಯಾಂಕ ಗಾಂಧಿ ಅವರು ಮಹಿಳೆಯರ ಧ್ವನಿಯಾಗಿ ಸಂದೇಶ ನೀಡುತ್ತಿದ್ದಾರೆ. ಇದು ಮಹಿಳೆಯರಿಗಾಗಿ ನಾವು ಮಾಡುವ ಕೆಲಸದ ಬಗ್ಗೆ ಗ್ಯಾರಂಟಿ ಪತ್ರವಾಗಲಿದೆ ಎಂದು ಭರವಸೆ ನೀಡಿದ್ದಾರೆ.

 

 

Scroll to Top