ಅಡುಗೆ ಸಿಲಿಂಡರ್‌ ಸೋರಿಕೆಯಿಂದ ಮನೆಗೆ ಬೆಂಕಿ ➤ ದಂಪತಿ ಹಾಗೂ ನಾಲ್ವರು ಮಕ್ಕಳು ಮೃತ್ಯು..!!

(ನ್ಯೂಸ್ ಕಡಬ) newskadaba.com ಚಂಡೀಗಢ, ಜ. 12. ಅಡುಗೆ ಸಿಲಿಂಡರ್ ಸೋರಿಕೆಯಾದ ಪರಿಣಾಮ ಮನೆಗೆ ಬೆಂಕಿ ಹೊತ್ತಿಕೊಂಡು ಒಂದೇ ಕುಟುಂಬದ ಆರು ಸದಸ್ಯರು ಮೃತಪಟ್ಟ ಭೀಕರ ಘಟನೆ ಚಂಡೀಗಢದ ಪಾಣಿಪತ್‌ನಲ್ಲಿ ವರದಿಯಾಗಿದೆ.

ಮೃತರನ್ನು ಅಬ್ದುಲ್ (45), ಅವರ ಪತ್ನಿ(40) ಮತ್ತು 18 ಮತ್ತು 16 ವರ್ಷದ ಇಬ್ಬರು ಪುತ್ರಿಯರು ಹಾಗೂ 12 ಮತ್ತು 10 ವರ್ಷದ ಇಬ್ಬರು ಪುತ್ರರು ಎಂದು ಗುರುತಿಸಲಾಗಿದೆ.

ಪಾಣಿಪತ್ ಜಿಲ್ಲೆಯ ಬಿಚ್ಪರಿ ಗ್ರಾಮದ ಬಳಿಯ ತಹಸಿಲ್ ಕ್ಯಾಂಪ್ ಪ್ರದೇಶದಲ್ಲಿ ಈ ದುರ್ಘಟನೆ  ಸಂಭವಿಸಿದೆ ಎನ್ನಲಾಗಿದೆ. ಮನೆಯಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ ಅಕ್ಕಪಕ್ಕದ ಮನೆಯವರು ಪೊಲೀಸರಿಗೆ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ರಕ್ಷಣಾ ತಂಡ ಪತ್ತೆ ಹಚ್ಚುವಷ್ಟರಲ್ಲಿ ಸಂತ್ರಸ್ತರು ಸುಟ್ಟು ಕರಕಲಾಗಿದ್ದರು ಎಂದು ತಿಳಿದುಬಂದಿದೆ.

error: Content is protected !!

Join the Group

Join WhatsApp Group