ಮಂಗಳೂರು: ಕಾರು ಮತ್ತು ಬೈಕ್ ನಡುವೆ ರಸ್ತೆ ಅಪಘಾತ…!! ➤ ಗಾಯಾಳುವಿಗೆ ನೆರವಾಗಿ ಮಾನವೀಯತೆ ಮೆರೆದ ಶಾಸಕ ಖಾದರ್

(ನ್ಯೂಸ್ ಕಡಬ)newskadaba.com ಮಂಗಳೂರು, ಜ.16. ಕಾರು-ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ನೇತ್ರಾವತಿ ಸೇತುವೆಯಲ್ಲಿ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರ ಗಾಯಗೊಂಡಿದ್ದು, ಗಾಯಗೊಂಡ ಬೈಕ್ ಸವಾರನನ್ನು ಆಸ್ಪತ್ರೆಗೆ ರವಾನಿಸುವ ಮೂಲಕ ಶಾಸಕ ಖಾದರ್ ಮಾನವೀಯತೆ ಮೆರೆದಿದ್ದಾರೆ.


ಸಂಜೆ ವೇಳೆ ಅಪಘಾತ ಸಂಭವಿಸಿದ್ದು, ಈ ಸಂದರ್ಭದಲ್ಲಿ ವಿಧಾನಸಭೆ ವಿಪಕ್ಷ ಉಪನಾಯಕ ಹಾಗೂ ಶಾಸಕ ಯು.ಟಿ. ಖಾದರ್ ಅದೇ ರಸ್ತೆ ಮೂಲಕ ಸಂಚರಿಸುತ್ತಿದ್ದರು. ತಕ್ಷಣ ಗಾಯಾಳುವನ್ನು ತನ್ನ ಕಾರಿನಲ್ಲೇ ಆಸ್ಪತ್ರೆಗೆ ರವಾನಿಸುವ ಮೂಲಕ ಖಾದರ್ ಮಾನವೀಯತೆ ಮೆರೆಯುವ ಜೊತೆಗೆ ತಮ್ಮ ಜನಪ್ರತಿನಿಧಿಯ ಜವಾಬ್ದಾರಿ ನಿಭಾಯಿಸಿದ್ದಾರೆ ಎನ್ನಲಾಗಿದೆ.

 

error: Content is protected !!

Join the Group

Join WhatsApp Group