ಸಚಿವರು, ಶಾಸಕರು ಮಾಡಬಹುದಾದ ಕೆಲಸ ಪ್ರಧಾನಿಯಿಂದ ಮಾಡಿಸುತ್ತಿದ್ದಾರೆ !! ➤ ಶಾಸಕ ಪ್ರಿಯಾಂಕ್ ಖರ್ಗೆ

(ನ್ಯೂಸ್ ಕಡಬ)newskadab.com  ಕಲಬುರಗಿ, ಜ.18. ಸಚಿವರು ಅಥವಾ ಶಾಸಕರು ವಿತರಿಸಬಹುದಾಗ ಹಕ್ಕುಪತ್ರ ವಿತರಣೆಗೆ ಪ್ರಧಾನಿಯನ್ನು ಕರೆಸುತ್ತಿದ್ದಾರೆ ಎಂದರೆ ಇವರು ಏನು ಕೆಲಸ ಮಾಡಿಲ್ಲವೆಂದೇ ಅರ್ಥ ಎಂದು ಶಾಸಕರಾದ ಶ್ರೀ ಪ್ರಿಯಾಂಕ್ ಖರ್ಗೆ ಲೇವಡಿ ಮಾಡಿದರು.

ಮಾಹಿತಿ ಪ್ರಕಾರ ಈಗಾಗಲೇ ದಾಖಲಾತಿಗಳು ಇರುವವರಿಗೆ ಮತ್ತೆ ಹಕ್ಕುಪತ್ರ ವಿತರಣೆ ಮಾಡಿಸಲಿದ್ದಾರೆ. ಈ ಬಗ್ಗೆ ಸುಭಾಷ್ ರಾಠೋಡ್ ವಿವರವಾಗಿ ಮಾತನಾಡಿದ್ದಾರೆ. ಯಾರಿಗೆ ಹಕ್ಕುಪತ್ರ ವಿತರಿಸಿದರು ಎನ್ನುವ ಬಗ್ಗೆ ದಾಖಲಾತಿಯೊಂದಿಗೆ ಇನ್ನೆರಡು ದಿನದಲ್ಲಿ ಮಾತನಾಡಲಿದ್ದೇನೆ ಎಂದರು. ಈ ಸರ್ಕಾರದಲ್ಲಿ ಏನು ನಡೆಯುತ್ತಿದೆ? ಎಂದು ಗೊತ್ತಾಗುತ್ತಿಲ್ಲ ಎಂದು ಟೀಕಿಸಿದರು.

Also Read  ಪಂಜ ಸೇರಿದಂತೆ ಹತ್ತಿರದ 7 ಗ್ರಾಮಗಳನ್ನು ಕಡಬ ತಾಲೂಕಿಗೆ ಸೇರಿಸಲು ಆಗ್ರಹ ► ಕಡಬ ತಾಲೂಕು ಉದ್ಘಾಟನೆಗೆ ಕ್ರಮ ಕೈಗೊಳ್ಳುವಂತೆ ದೇವೇಗೌಡರಿಗೆ ಮನವಿ.

 

error: Content is protected !!
Scroll to Top