ಮಾಣಿ: ಅಗ್ನಿ ಅವಘಡ ➤ ಮನೆ ಸಂಪೂರ್ಣ ಬೆಂಕಿಗಾಹುತಿ

(ನ್ಯೂಸ್ ಕಡಬ) newskadaba.com ವಿಟ್ಲ, ಜ. 19. ಮನೆಯೊಂದಕ್ಕೆ ಬೆಂಕಿ ತಗುಲಿದ ಪರಿಣಾಮ ಮನೆ ಸಂಪೂರ್ಣ ಸುಟ್ಟುಹೋದ ಘಟನೆ ಮಾಣಿಯಲ್ಲಿ ನಡೆದಿದೆ.

ಮಾಣಿ ಗ್ರಾಮದ ಕಾಪಿಕಾಡು ಸಮೀಪದ ಜನತಾ ಕಾಲೊನಿ ನಿವಾಸಿ ರಮಾ ಅಶೋಕ ಪೂಜಾರಿ ಎಂಬವರ ಮನೆ ಬೆಂಕಿಗಾಹುತಿಯಾಗಿದ್ದು, ಮನೆಯಲ್ಲಿ ಯಾರೂ ಇಲ್ಲದ ವೇಳೆ ಈ ದುರ್ಘಟನೆ ಸಂಭವಿಸಿದೆ. ಬೆಂಕಿಯನ್ನು ಗಮನಿಸಿದ ಪಕ್ಕದ ಮನೆಯವರು ನೀಡಿದ ಮಾಹಿತಿಯಂತೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಅಷ್ಟರಲ್ಲೇ ಮನೆ ಸಂಪೂರ್ಣ ಸುಟ್ಟುಕರಕಲಾಗಿತ್ತು. ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ತನಿಖೆ ಮುಂದುವರಿಸಿದ್ದಾರೆ.

Also Read  ಮಂಗಳೂರು: ಮೃತಪಟ್ಟಿದ್ದಾನೆಂದು ಮನೆಗೆ ಕಳುಹಿಸಿದ ವ್ಯಕ್ತಿ ದಾರಿಮಧ್ಯೆ ಉಸಿರಾಡಿದ...! ➤ ಇತ್ತ ಅಂತ್ಯಸಂಸ್ಕಾರಕ್ಕೆ ತಯಾರಿ ನಡೆಸಿದ ಕುಟುಂಬಸ್ಥರು..!!

error: Content is protected !!
Scroll to Top