ಕೇಂದ್ರ ಬಜೆಟ್‌ಗೂ ಮೊದಲು ಸರಕಾರದಿಂದ ರೈತರಿಗೆ ಭರ್ಜರಿ ಗಿಫ್ಟ್ !!

(ನ್ಯೂಸ್ ಕಡಬ)newskadaba.com  ನವದೆಹಲಿ, ಜ.20. ಕೇಂದ್ರ ಸರಕಾರದಿಂದ ಭಾರೀ ಉಡುಗೊರೆಯ ನಿರೀಕ್ಷೆಯಲ್ಲಿರುವ ರೈತರಿಗಾಗಿ ಬಜೆಟ್‌ಗೂ ಮೊದಲೇ ಸಿಹಿ ಸುದ್ದಿಯೊಂದನ್ನು ನೀಡಿದೆ. ದೇಶದ ಬೆನ್ನೆಲುಬಾಗಿರುವ ರೈತರನ್ನು ಉತ್ತೇಜಿಸುವ ನಿಟ್ಟಿನಲ್ಲಿ ದೇಶದ ಎಲ್ಲಾ ರೈತರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಸೌಲಭ್ಯವನ್ನು ಒದಗಿಸುವಂತೆ ಸಾರ್ವಜನಿಕ ವಲಯದ ಬ್ಯಾಂಕ್‌ಗಳ ಮುಖ್ಯಸ್ಥರಿಗೆ ಸರಕಾರ ಸೂಚನೆ ನೀಡಿದೆ.

ಈ ಯೋಜನೆ ಅಡಿಯಲ್ಲಿ ರೈತರಿಗೆ ಕೃಷಿಗೆ ಸಂಬಂಧಪಟ್ಟಂತೆ ಸಾಲ ಸೌಲಭ್ಯವನ್ನು ನೀಡಲಾಗುತ್ತದೆ ಈ ಯೋಜನೆಯ ಪ್ರಯೋಜನವನ್ನು ಎಲ್ಲಾ ರೈತಾಪಿ ಮಿತ್ರರು ಪಡೆದುಕೊಳ್ಳಬೇಕು ಎನ್ನುವುದು ಸರಕಾರದ ಉದ್ದೇಶವಾಗಿದೆ.

 

 

error: Content is protected !!

Join the Group

Join WhatsApp Group