ಗಣರಾಜ್ಯೋತ್ಸವದ ಧ್ವಜಾರೋಹಣ ನಡೆಸಿ ವಾಪಾಸ್ಸಾಗುವಾಗ ರಸ್ತೆ ಅಪಘಾತ ! ➤ ಪಿಡಿಒಗೆ ಗಂಭೀರ ಗಾಯ

(ನ್ಯೂಸ್ ಕಡಬ)newskadaba.com  ಹನೂರು, ಜ.26. ಗಣರಾಜ್ಯೋತ್ಸವದ ಹಿನ್ನೆಲೆ ಧ್ವಜಾರೋಹಣ ನೆರವೇರಿಸಿ ವಾಪಾಸ್ಸಾಗುವಾಗ ಸಂಭವಿಸಿದ ಅಪಘಾತದಲ್ಲಿ ಪಿಡಿಒ ಗಂಭೀರವಾಗಿ ಗಾಯಗೊಂಡ ಘಟನೆ ರಾಮಾಪುರ – ದಿನ್ನಳ್ಳಿ ಮಾರ್ಗ ಮಧ್ಯದಲ್ಲಿ ಸಂಭವಿಸಿದೆ ಎನ್ನಲಾಗಿದೆ.

ಪಿಡಿಒ ಸೋಮಶೇಖರ್ ಅವರು ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿ ವಾಪಸ್ಸಾಗುವಾಗ ಗೂಡ್ಸ್ ಆಟೋ ಬೈಕ್ ಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಸೋಮಶೇಖರ್ ತಲೆಗೆ ತೀವ್ರವಾದ ಗಾಯವಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

error: Content is protected !!

Join the Group

Join WhatsApp Group