ರಾಜ್ಯ ಮಟ್ಟದ ಕೃಷಿ ಮೇಳ ➤ ಸಿಎಂ ಬೊಮ್ಮಾಯಿ ಚಾಲನೆ

ನ್ಯೂಸ್ ಕಡಬ) newskadaba.com, ಬೆಂಗಳೂರು, ಜ.27. ಅರಮನೆ ನಗರಿ ಮೈಸೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಕೃಷಿ ಮೇಳವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜ.27 ರಂದು ಉದ್ಘಾಟಿಸಿದರು.

ಈ ಬಾರಿ ರಾಜ್ಯ ಸರ್ಕಾರ ಮತ್ತು ಮೈಸೂರು ವಿಶ್ವವಿದ್ಯಾಲಯ ಸಹಯೋಗದಲ್ಲಿ ನಗರದ ಮಹಾರಾಜ ಕಾಲೇಜು  ಮೈದಾನದಲ್ಲಿ ಭಾನುವಾರದವರೆಗೆ ನಡೆಯುವ ಮೇಳದಲ್ಲಿ 120 ಮಳಿಗೆಗಳನ್ನು ತೆರೆಯಲಾಗಿದೆ. ಸಮಗ್ರ ಕೃಷಿ, ಸಾವಯವ ಕೃಷಿ, ಆಧುನಿಕ ಬೇಸಾಯ , ಉತ್ತಮ ಬಿತ್ತನೆ ಬೀಜಗಳು, ಕೃಷಿ ಅನ್ವೇಷಣೆ ಇನ್ನಿತರ ಮಾಹಿತಿ ಸಿಗಲಿವೆ.  ವೀರಗಾಸೆ, ಕಂಸಾಳೆ, ಸುಗ್ಗಿ ಕುಣಿತ, ಕೊಡವ ಸಾಂಸ್ಕೃತಿಕ ನೃತ್ಯ, ಗೀತಾ ಗಾಯನ ಮೊದಲಾದ ಕಾರ್ಯಕ್ರಮಗಳು ನಡೆಯಲಿದೆ ಎಂದು ತಿಳಿದು ಬಂದಿದೆ.

error: Content is protected !!

Join the Group

Join WhatsApp Group