ಮೂಲ್ಕಿ: ಲಾರಿ ದುರಸ್ತಿ ಮಾಡುತ್ತಿದ್ದಾಗ ಕಾರು ಢಿಕ್ಕಿ    ➤ ಇಬ್ಬರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಮೂಲ್ಕಿ, ಫೆ.02. ಹೆದ್ದಾರಿ ಬದಿಯಲ್ಲಿ ಲಾರಿ ದುರಸ್ತಿ ಮಾಡುತ್ತಿದ್ದವರಿಗೆ ಕಾರು ಢಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿ 66ರ ಪಡುಪಣಂಬೂರು ಪೆಟ್ರೋಲ್ ಪಂಪಿನ ಬಳಿ ನಡೆದಿದೆ.

ಮಧ್ಯ ಪ್ರದೇಶದ ಬಬುಲು (23) ಅಚಲ್ ಸಿಂಗ್ (30) ಮೃತ ದುರ್ದೈವಿಗಳು. ಕೇರಳ ನಿವಾಸಿ ಅನಿಶ್ (42) ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಧ್ಯಪ್ರದೇಶದ ಇಂದೋರ್‌ನಿಂದ ಕೇರಳಕ್ಕೆ ಪ್ರಯಾಣಿಸುತ್ತಿದ್ದ ಲಾರಿಯ ಚಕ್ರ ಪಂಕ್ಚರ್ ಆಗಿ ಪಡುಪಣಂಬೂರು ಹೆದ್ದಾರಿ ಬಳಿ ಕೆಟ್ಟು ನಿಂತಿತ್ತು. ಹೀಗಾಗಿ ಲಾರಿಯನ್ನು ದುರಸ್ತಿ ಮಾಡಲೆಂದು ಮೂವರು ಲಾರಿಯಿಂದ ಇಳಿದು ಟಯರ್ ಬದಲಿಸುತ್ತಿದ್ದರು. ಈ ವೇಳೆ ಉಡುಪಿ ಕಡೆಯಿಂದ ಬಂದ ಕಾರು ಮೂವರಿಗೂ ಢಿಕ್ಕಿಯಾಗಿದೆ.

Also Read  ಕರ್ನಾಟಕ ವಿಶೇಷ ಒಲಿಂಪಿಕ್ಸ್ ವತಿಯಿಂದ ► ರಾಜ್ಯ ಕ್ರೀಡಾ ತರಬೇತುದಾರ ಪ್ರಭಾಕರ್ ಮರ್ಕಂಜರವರಿಗೆ ಸನ್ಮಾನ

error: Content is protected !!
Scroll to Top