➤ ಟ್ರಾಕ್ಟರ್ ಹಾಗೂ ಲಾರಿಗೆ ಡಿಕ್ಕಿ ಹೊಡೆದ ಕಾರು ➤ ಇಬ್ಬರು ಸ್ಥಳದಲ್ಲೇ ಮೃತ್ಯು..!

(ನ್ಯೂಸ್ ಕಡಬ) newskadaba.com. ದಾವಣಗೆರೆ .ಫೆ.9.   ಕಾರೊಂದು ಎಕ ಕಾಲಕ್ಕೆ ಟ್ರಾಕ್ಟರ್ ಹಾಗೂ ಲಾರಿಗೆ ಡಿಕ್ಕಿ ಹೊಡೆದು, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಫೆ.9 ರಂದು ತಾಲೂಕಿನ ರಾಮಗೊಂಡನಹಳ್ಳಿ ಬಳಿ ನಡೆದಿದೆ.

ದಾವಣಗೆರೆಯಲ್ಲಿ ಮದ್ವೆ ಮುಗಿಸಿಕೊಂಡ ಸ್ವ ಗ್ರಾಮ ಚನ್ನಗಿರಿ ತಾಲೂಕಿನ ಪಾಂಡೊಮಟ್ಟಿಗೆ ಹೋಗುತ್ತಿದ್ದ ಯುವಕರು. ರಾತ್ರಿ ಎದುರಿಗೆ ಬರುತ್ತಿದ್ದ ಟ್ರಾಕ್ಟರ್​ಗೆ ಹೊಡೆದು ನಂತರ ಲಾರಿಗೆ ಡಿಕ್ಕಿ ಹೊಡೆದಿದ್ದಾರೆ. ಕಾರಿನಲ್ಲಿದ್ದ ಮೂವರಲ್ಲಿ ಇಬ್ಬರಾದ ಮಂಜುನಾಥ(24) ಹಾಗೂ ಅಮೃತ್(23) ಸಾವನ್ನಪ್ಪಿದ್ದು, ಓರ್ವನ ಸ್ಥಿತಿ ಗಂಭೀರವಾಗಿದ್ದು, ದಾವಣಗೆರೆಯ ಎಸ್ ಎಸ್ ಆಸ್ಪತ್ರೆಗೆ ಸೇರಿಸಲಾಗಿದೆ., ಮಾಯಕೊಂಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  ಪ್ರಕರಣ ದಾಖಲಾಗಿದೆ.

error: Content is protected !!

Join the Group

Join WhatsApp Group