(ನ್ಯೂಸ್ ಕಡಬ)newskadaba.com ಮರ್ಧಾಳ, ಫೆ.14. ಬೆಥನಿ ಜೀವನ್ ಜ್ಯೋತಿ ವಿಶೇಷ ಶಾಲೆಯ ಸಮೀಪದ ರಬ್ಬರ್ ತೋಟಕ್ಕೆ ಆಕಸ್ಮಿಕ ಬೆಂಕಿ ತಗುಲಿ ರಬ್ಬರ್ ಮರಗಳು ಬೆಂಕಿಗಾಹುತಿಯಾಗಿರುವ ಘಟನೆ ಮಧ್ಯಾಹ್ನ ಸಂಭವಿಸಿದೆ.

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿದ್ದು ಬೆಂಕಿಯ ಕೆನ್ನಾಲಗೆ ಬೆಥನಿ ಜೀವನ್ ಜ್ಯೋತಿ ವಿಶೇಷ ಶಾಲೆಯ ರಬ್ಬರ್ ತೋಟಕ್ಕೆ ಹಾಗೂ ಪಕ್ಕದಲ್ಲಿರುವ ಕುಕ್ಕೆ ಸುಬ್ರಮಣ್ಯ ಮಠದ ಜಾಗಕ್ಕೆ ವ್ಯಾಪಿಸಿದೆ.






