ಕಾರು ಮತ್ತು ಬೈಕ್ ನಡುವೆ ಅಪಘಾತ.!    ➤  ಇಬ್ಬರು ಸ್ಥಳದಲ್ಲಿಯೇ ಮೃತ್ಯು

(ನ್ಯೂಸ್ ಕಡಬ)newskadaba.com ಬೆಳಗಾವಿ, ಫೆ.16. ಕಾರೊಂದು ಬೈಕ್ ‘ಗೆ ಢಿಕ್ಕಿಯಾದ ಪರಿಣಾಮ ಅಣ್ಣ-ತಮ್ಮ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ದಾರುಣ ಘಟನೆ ಚಿಕ್ಕೋಡಿ ತಾಲೂಕಿನ ಬೆಳಕೂಡ ಗೇಟ್ ಬಳಿ ಸಂಭವಿಸಿದೆ.

ಚಿಕ್ಕೋಡಿ ತಾಲೂಕಿನ ನವಳಿಹಾಳ ಗ್ರಾಮದ ಶಿವಕುಮಾರ ರಾಜು ಘೋಷೆ (25), ಸಹೋದರ ಅಶ್ವಿನ್ ಕುಮಾರ್ ರಾಜು ಘೋಷೆ (23) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಸ್ವಗ್ರಾಮದಿಂದ ಗೋಕಾಕ್ ತಾಲೂಕಿನ ಶಿಂಧಿಕುರಬೇಟ ಎಂಬ ಗ್ರಾಮದ ಕಡೆಗೆ ಹೊರಟ್ಟಿದ್ದರು. ಕಾರು ಕಬ್ಬೂರು ಗ್ರಾಮದ ಕಡೆಯಿಂದ ಬರುತ್ತಿತ್ತು. ಬೆಳಕೂಡ ಗೇಟ್ ಬಳಿ ಕಾರು ಚಾಲಕ ಮುಂದೆ ಇದ್ದ ವಾಹನವನ್ನು ಓವರ್ ಟೇಕ್ ಮಾಡಲು ಹೋಗಿ ಎದುರುಗಡೆ ಬರುತ್ತಿದ್ದ ಬೈಕ್’ಗೆ ಡಿಕ್ಕಿ ಹೊಡೆದಿದ್ದಾನೆ ಎಂದು ತಿಳಿದುಬಂದಿದೆ.

 

 

error: Content is protected !!

Join the Group

Join WhatsApp Group