ಮಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿ ಶಾಫಿ ಬೆಳ್ಳಾರೆಗೆ ಟಿಕೆಟ್ ನೀಡಿರುವುದು ಖಂಡನೀಯ     ➤ ಸಂಸದ ನಳಿನ್ ಕುಮಾರ್…!!!

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.18. ಪ್ರವೀಣ್ ನೆಟ್ಟಾರು ಕೊಲೆ ಆರೋಪಿಗೆ ಎಸ್.ಡಿ.ಪಿ.ಐ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ ನೀಡಿದ್ದಾರೆ.

ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಶಾಫಿ ಬೆಳ್ಳಾರೆ ಜೈಲಿನಲ್ಲಿ ಇರೋ ವ್ಯಕ್ತಿ, ಅಂಥವನಿಗೆ ಎಸ್ ಡಿಪಿಐ ಟಿಕೆಟ್ ಕೊಟ್ಟಿದೆ. ಕ್ರಿಮಿನಲ್ ಹಿನ್ನೆಲೆ ವ್ಯಕ್ತಿಯನ್ನು ಅಭ್ಯರ್ಥಿ ಮಾಡಿರುವುದು ಸರಿಯಲ್ಲ. ಪಿಎಫ್ಐ ಸದಸ್ಯನನ್ನು ಎಸ್ ಡಿಪಿಐ ಅಭ್ಯರ್ಥಿ ಮಾಡಿರೋದು ಸರಿಯಲ್ಲ ಎಂದಿದ್ದಾರೆ.

error: Content is protected !!

Join the Group

Join WhatsApp Group