ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಟ್ವಿಟರ್ ನಲ್ಲಿ ಪೋಸ್ಟ್ ಮಾಡಿದ ಯುವಕ ➤ಮುಂಬೈ ಪೊಲೀಸರಿಂದ ರಕ್ಷಣೆ!

(ನ್ಯೂಸ್ ಕಡಬ) newskadaba.com. ಮುಂಬೈ. ಫೆ.18.  ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ ಕೆಲವೇ ಗಂಟೆಗಳಲ್ಲಿ ಮುಂಬೈ ಪೊಲೀಸರು 24 ವರ್ಷದ ಯುವಕನನ್ನು ಪತ್ತೆಹಚ್ಚಿದ್ದಾರೆ ಮತ್ತು ಆತನನ್ನು ಕೌನ್ಸೆಲಿಂಗ್‌ಗಾಗಿ ಕಳುಹಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ಸಾಲದ ಸುಳಿಗೆ ಸಿಲುಕಿರುವ ವ್ಯಕ್ತಿ, ನಗರದ ಚೆಂಬೂರು ಸಮೀಪದ ಚುನಾಭಟ್ಟಿ ನಿವಾಸಿಯಾಗಿದ್ದು, ರಾಯಗಡ ಜಿಲ್ಲೆಯ ಕರ್ಜತ್‌ನಲ್ಲಿ ಪತ್ತೆಯಾಗಿದ್ದಾನೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಈ ವ್ಯಕ್ತಿ ರೈಲಿನಲ್ಲಿ ಕಡಲೆಕಾಯಿ ಬೀಜ ಮತ್ತು ಬೆಲ್ಲದಿಂದ ತಯಾರಿಸಿದ ತಿನಿಸು ಸಿಹಿತಿಂಡಿಯನ್ನು ಮಾರಾಟ ಮಾಡುತ್ತಿದ್ದನು. ಆದರೆ, ನಷ್ಟದಿಂದಾಗಿ ಸಾಲದ ಸುಳಿಯಲ್ಲಿ ಮುಳುಗಿದ್ದನು ಎಂದು ಅಧಿಕಾರಿ ತಿಳಿಸಿದ್ದಾರೆ. ಶುಕ್ರವಾರ ಸಂಜೆ ಟ್ವಿಟರ್‌ನಲ್ಲಿ ವ್ಯಕ್ತಿಯೊಬ್ಬನ ಸುದೀರ್ಘ ಸಂದೇಶವನ್ನು ನಗರ ಪೊಲೀಸ್‌ನ ಅಪರಾಧ ವಿಭಾಗವು ನೋಡಿದೆ. ತಾನು ತನ್ನ ವ್ಯಾಪಾರಗಳಲ್ಲಿ ಹಲವಾರು ಹಿನ್ನಡೆಗಳನ್ನು ಅನುಭವಿಸಿದ್ದೇನೆ ಮತ್ತು ತನ್ನ ಜೀವನವನ್ನು ಕೊನೆಗೊಳಿಸಲು ಯೋಜಿಸುತ್ತಿದ್ದೇನೆ ಎಂದು ವ್ಯಕ್ತಿ ಬರೆದಿದ್ದನ್ನು ಗಮನಿಸಿದ್ದಾರೆ.

Scroll to Top